Select Your Language

Notifications

webdunia
webdunia
webdunia
webdunia

ಮೈಕ್ ನಿಷೇಧಕ್ಕೆ ಶ್ರೀರಾಮಸೇನೆ ಆಗ್ರಹ

ಮೈಕ್ ನಿಷೇಧಕ್ಕೆ ಶ್ರೀರಾಮಸೇನೆ ಆಗ್ರಹ
bangalore , ಸೋಮವಾರ, 4 ಏಪ್ರಿಲ್ 2022 (17:48 IST)
ಮಸೀದಿ ಮೇಲಿನ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯವಾಗುತ್ತಿದೆ. ಹೆಚ್ಚು ಶಬ್ದವಿಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮಸೀದಿ ಮೇಲಿನ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ. ಮಹಾರಾಷ್ಟ್ರದ ರಾಜ್ ಠಾಕ್ರೆ ಹೇಳಿಕೆಗೆ ಸಿದ್ದಲಿಂಗಸ್ವಾಮೀಜಿ ಬೆಂಬಲ ನೀಡಿದ್ದು, ರಾಜ್ಯದಲ್ಲಿ ಕೂಡಾ ಮಸೀದಿಯಲ್ಲಿನ ಧ್ವನಿವರ್ಧಕ ಗಳನ್ನು ಬಂದ್ ಮಾಡಬೇಕು. ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಜೊತೆಗೆ ಪರಿಸರ ಮಾಲಿನ್ಯ ಕೂಡಾ ಆಗುತ್ತಿದೆ. ರಂಜಾನ್ ಸಮಯದಲ್ಲಿ ಸೈರನ್ ಬಳಸೋದರಿಂದ ಕೂಡ ಜನರಿಗೆ ಕಿರಿಕಿರಿ ಆಗುತ್ತಿದೆ. ರಾಜ್ಯದಲ್ಲಿ ಮಸೀದಿಯಲ್ಲಿನ ಧ್ವನಿವರ್ಧಕ ನಿಷೇಧ ಮಾಡುವಂತೆ ಮನವಿ ಮಾಡಿದ್ದೆವು. ಆದರೆ ಇಲ್ಲಿಯವರಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದ್ರು ಕೂಡಲೇ ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಅಂತ ಕಲಬುರಗಿಯಲ್ಲಿ ಸಿದ್ದಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಜ್ಜು