Webdunia - Bharat's app for daily news and videos

Install App

ಮೈಸೂರು: ಕೇರಳ ಕುಟುಂಬದ ಐವರ ಆತ್ಮಹತ್ಯೆ

ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರು

Webdunia
ಸೋಮವಾರ, 8 ಸೆಪ್ಟಂಬರ್ 2008 (12:09 IST)
ಕೇರಳ ಮೂಲದ ಕುಟುಂಬವೊಂದರ ಇಬ್ಬರು ಮಹಿಳೆಯರು ಸೇರಿದಂತೆ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಸಂಗಂ ಚಿತ್ರ ಮಂದಿರ ಸಮೀಪದಲ್ಲಿನ ಆದಿಮ್ಯಾನರ್ ವಸತಿಗೃಹದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೆಆರ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಕೇರಳ ರಾಜ್ಯದ ಆಲಪುರ ಜಿಲ್ಲೆಯವರಾದ ಬಾಲಕೃಷ್ಣ ಪಣಿಕರ್ ಮತ್ತು ಅವರ ಪತ್ನಿ ರತ್ನಮ್ಮ, ಇವರ ಮಗ ವಿಜಯನ್ ನಂಬಿ, ಸೊಸೆ ಇಂದು ಹಾಗೂ ಜೊತೆಯಲ್ಲಿ ಬಂದಿದ್ದ ಸಂಬಂಧಿ ಮಹಿಳೆ ಬಿಂದು ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಬೆಳಗಿನ ಜಾವ ಬಾಲಕಿ ಅನುಪಮಾ ಎಚ್ಚರಗೊಂಡಾಗ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ನೋಡಿ ಗಾಬರಿಗೊಂಡಳು. ಕೂಡಲೇ ಹೊಟೇಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಇನ್ನೊಬ್ಬ ಬಾಲಕಿ ಅಖಿಲಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಘಟನೆಯನ್ನು ಕೈಗೆತ್ತಿಕೊಂಡಿರುವ ಮೈಸೂರು ಪೊಲೀಸರು ತೀವ್ರ ತನಿಖೆ ಮುಂದುವರೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments