Webdunia - Bharat's app for daily news and videos

Install App

ಮೋದಿ ಹಗಲು ಕನಸು ಯಾವತ್ತೂ ನನಸಾಗದು: ಖರ್ಗೆ

Webdunia
ಶನಿವಾರ, 17 ಆಗಸ್ಟ್ 2013 (14:50 IST)
PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗುವ ಹಗಲು ಕನಸು ಕಾಣುತ್ತಿದ್ದಾರೆ. ಅವರ ಹಗಲು ಕನಸು ಯಾವತ್ತು ನನಸಾಗದು ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಎಂ.ಮಲ್ಲಿಕಾರ್ಜುನ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರ ಭಾಷಣಕ್ಕೆ ಪ್ರತಿಯಾಗಿ ನರೇಂದ್ರ ಮೋದಿ ಪ್ರತಿ ಹೇಳಿಕೆ ನೀಡುವ ಮೂಲಕ ದೊಡ್ಡವರನ್ನು ಹೋಲಿಸಿಕೊಂಡ್ರೆ ಪ್ರಧಾನಿಯಾಗ್ಬಹುದು ಎಂದು ಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಗುಜರಾತ್ ರಾಜ್ಯ ಅಭಿವೃದ್ಧಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಸುಳ್ಳನ್ನು ಮೋದಿ ಹೇಳುತ್ತಿದ್ದಾರೆ. ಯೋಜನಾ ಆಯೋಗದ ಪ್ರಕಾರ ಗುಜರಾತ್ ರಾಜ್ಯ ಅಭಿವೃದ್ಧಿಯಲ್ಲಿ 10-12ನೇ ಸ್ಥಾನದಲ್ಲಿದೆ. ಕೇರಳ, ಹರಿಯಾಣಾ ಮತ್ತು ಮಹಾರಾಷ್ಟ್ರ ರಾಜ್ಯಗಳು ಮುಂಚೂಣಿಯಲ್ಲಿವೆ ಎಂದು ತಿರುಗೇಟು ನೀಡಿದರು.

ಸ್ವಾತಂತ್ರ್ಯ ದಿನದಂದೇ ಪ್ರಧಾನಿಗಳ ಭಾಷಣಕ್ಕೆ ಪ್ರತಿಯಾಗಿ ಯಾವುದೇ ರಾಜ್ಯದ ಮುಖ್ಯಮಂತ್ರಿಗಳು ಟೀಕೆ ಮಾಡಿದ ಉದಾಹರಣೆಗಳು ದೇಶದಲ್ಲಿಲ್ಲ. ಬಿಜೆಪಿ ಹಿರಿಯ ನಾಯಕ ಆಡ್ವಾಣಿಯವರೆ ಮೋದಿ ಭಾಷಣಕ್ಕೆ ಅಸಮಾಧಾನ ವ್ಯಕ್ತಪಡಿಸಿ ಪ್ರಬುದ್ಧತೆ ಮೆರೆದಿದ್ದಾರೆ ಎಂದು ಸಚಿವ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments