Webdunia - Bharat's app for daily news and videos

Install App

ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ಚಾಲನೆ

Webdunia
ಸೋಮವಾರ, 24 ಡಿಸೆಂಬರ್ 2007 (19:10 IST)
ಯಕ್ಷಗಾನ ಕಲಾವಿದರ ದಶಕಗಳ ಬೇಡಿಕೆ ಕೊನೆಗೂ ಫಲಿಸಿದೆ. ಪ್ರತ್ಯೇಕ ಯಕ್ಷಗಾನ ಅಕಾಡೆಮಿ ಸ್ಥಾಪನೆಗೆ ಸರ್ಕಾರ ಅಂತಿಮ ಮುದ್ರೆಯನ್ನು ಹಾಕಿದ್ದು, ಮುಂದಿನ ಏಪ್ರಿ‌ಲ್‌ನಲ್ಲಿ ಅದು ಕಾರ್ಯಾರಂಭ ಮಾಡಲಿದೆ ಎಂದು ತಿಳಿದುಬಂದಿದೆ.

ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಆಡಳಿತ ಮಂಡಳಿಯ ಮೂರು ವರ್ಷಗಳ ಅವಧಿಯು ಬರುವ ಮಾರ್ಚ್ ಅಂತ್ಯಕ್ಕೆ ಕೊನೆಗೊಳ್ಳಲಿದೆ. ನಂತರ ಕರ್ನಾಟಕ ಯಕ್ಷಗಾನ ಅಕಾಡೆಮಿ ಮತ್ತು ಜಾನಪದ ಅಕಾಡೆಮಿಯನ್ನು ಪ್ರತ್ಯೇಕಿಸಲಾಗುವುದು ಎಂದು ಸುದ್ದಿಮೂಲಗಳು ತಿಳಿಸಿವೆ.

ಕರಾವಳಿ ಪ್ರದೇಶ ಹೊರತುಪಡಿಸಿ ರಾಜ್ಯದ ಇನ್ನುಳಿದ ಭಾಗಗಳಲ್ಲೂ ಜನಪ್ರಿಯವಾಗಿರುವ ಸಣ್ಣಾಟ ಮತ್ತು ದೊಡ್ಡಾಟ ಕಲಾ ಪ್ರಕಾರಗಳನ್ನೂ ಈ ನೂತನ ಯಕ್ಷಗಾನ ಅಕಾಡೆಮಿಯ ವ್ಯಾಪ್ತಿಗೆ ತರಲು ತೀರ್ಮಾನಿಸಲಾಗಿದೆ.

ಪ್ರಸ್ತುತ ಇರುವ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯಲ್ಲಿ ಯಕ್ಷಗಾನ ಕಲೆ ಮತ್ತು ಕಲಾವಿದರಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ, ಮಲತಾಯಿ ಧೋರಣೆ ಅನುಸರಿಸಲಾಗುತ್ತದೆ ಎಂಬ ಅಸಮಾಧಾನಗಳು ಆಗಾಗ ಕೇಳಿಬರುತ್ತಿದ್ದವು.

ಈ ಧೋರಣೆಗೆ ದನಿಗೂಡಿಸಿದ ಕೆರೆಮನೆ ಶಂಭು ಹೆಗಡೆ, ಶೇಣೆ ಗೋಪಾಲಕೃಷ್ಣ ಭಟ್, ಕುಂಬ್ಳೆ ಸುಂದರರಾವ್ ಸೇರಿದಂತೆ ಅನೇಕ ಹಿರಿಯ ಯಕ್ಷಗಾನ ಕಲಾವಿದರು, ವಿದ್ವಾಂಸರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಅವರ ಬೇಡಿಕೆಗೆ ಸಂದ ಜಯ ಇದಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments