Webdunia - Bharat's app for daily news and videos

Install App

ರಂಗನತಿಟ್ಟಿನಲ್ಲಿ ಹಕ್ಕಿಗಳ ಸಂಕಷ್ಟ

Webdunia
ಶನಿವಾರ, 14 ಜುಲೈ 2007 (12:23 IST)
ಹೆಸರಾಂತ ಪ್ರವಾಸೀ ತಾಣ ರಂಗನತಿಟ್ಟಿನಲ್ಲಿ ಇದೀಗ ವಲಸೆ ಹಕ್ಕಿಗಳ ಸಂಕಷ್ಟ ಹೇಳ ತೀರದು. ಪಕ್ಷಿಧಾಮದಲ್ಲಿ ನೀರಿನ ಮಟ್ಟ ದಿನೇದಿನೇ ಹೆಚ್ಚುತ್ತಿದ್ದು, ವಲಸೆ ಹಕ್ಕಿಗಳು ಅತಂತ್ರಂತೆ ಎದುರಿಸುವ ಭೀತಿ ಎದುರಾಗಿದೆ.

ಈ ನಡುವೆ ಶುಕ್ರವಾರ ಮುಂಜಾನೆಯಿಂದಲೇ ದೋಣಿ ವಿಹಾರವನ್ನು ರದ್ದುಗೊಳಿಸಲಾಗಿದೆ ಎಂದು ಪಕ್ಷಧಾಮದ ಅಧಿಕಾರಿಗಳು ತಿಳಿಸಿದ್ದಾರೆ.

ಮಿತಿಮೀರಿದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಹಾಗಿದ್ದೂ ರಂಗನ ತಿಟ್ಟಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಕಡಿತವಾಗಿಲ್ಲ.

ನೀರಿನ ಮಟ್ಟ ಏರುತ್ತಿರುವ ಹಿನ್ನೆಲೆಯಲ್ಲಿ ವಲಸೆ ಹಕ್ಕಿಗಳು ಮರದ ಮೇಲೆ ಸುರಕ್ಷಿತ ಆಶ್ರಯ ಪಡೆಯುತ್ತಿವೆ. ತುಂಬಿತುಳುಕುತ್ತಿರುವ .ಆರ್.ಎಸ್.ಕನ್ನಂಬಾಡಿ ಜಲಾಶಯ ತುಂಬಿ ಹರಿಯುತ್ತಿದ್ದು ಜಲಾಶಯದ ಮಟ್ಟ 124 ಅಡಿ ತಲುಪಿದೆ.

ಈ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳು. ಒಳ ಹರಿಯುವಿಕೆಯಲ್ಲಿ ಏರಿಕೆಯಾದ್ದರಿಂದ ಮುನ್ನೆಚಚರಿಕೆ ಕ್ರಮವಾಗಿ ಗುರುವಾರ ರಾತ್ರಿಯಿಂದಲೇ ಕ್ರಸ್ಟ್ ಗೇಟ್ ಗಳನ್ನು ತೆರೆದು ನದಿಗೆ ನೀರನ್ನು ಹರಿಯ ಬಿಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments