Webdunia - Bharat's app for daily news and videos

Install App

ರಾಮನಗರದಲ್ಲೇ ಕುಮಾರಸ್ವಾಮಿ ಸ್ಪರ್ಧಿಸುವುದಕ್ಕೆ ಪತ್ನಿ ಅನಿತಾ ಮನವೊಲಿಕೆ

Webdunia
PR
PR
ಬೆಂಗಳೂರು: ಜೀವರಾಜ್ ಆಳ್ವ ಅವರ ಪತ್ನಿ ನಂದಿನಿ ಆಳ್ವ ಅವರು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ನಂದಿನಿ ಆಳ್ವ ಅವರು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದಾರೆ. ಏತನ್ಮಧ್ಯೆ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸದಂತೆ ಅವರ ಮನವೊಲಿಸಿ ಎಂದು ಅನಿತಾಕುಮಾರ ಸ್ವಾಮಿ ದೇವೇಗೌಡರ ಮೊರೆ ಹೋಗಿದ್ದಾರೆ. ರಾಮನಗರದ ಮತದಾರರು ಕಷ್ಟಕಾಲದಲ್ಲಿ ನಮ್ಮನ್ನು ಕೈಹಿಡಿದಿದ್ದಾರೆ. ಅವರಿಗೆ ದ್ರೋಹ ಮಾಡುವುದು ಬೇಡ. ಆದ್ದರಿಂದ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಬದಲಿಗೆ ರಾಮನಗರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡಲಿ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚೆಗೆ ಕುಮಾರಸ್ವಾಮಿ ತಾವು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ಸಮಾವೇಶದಲ್ಲಿ ಘೋಷಿಸಿದ್ದರು. ಇದರಿಂದ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ವಿರುದ್ಧ ಕುಮಾರಸ್ವಾಮಿ ಹಣಾಹಣಿಗೆ ವೇದಿಕೆ ಸಿದ್ದವಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments