Select Your Language

Notifications

webdunia
webdunia
webdunia
webdunia

ರೆಬೆಲ್ ಸ್ಟಾರ್ ಅಂಬರೀಷ್‌ಗೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

ರೆಬೆಲ್ ಸ್ಟಾರ್ ಅಂಬರೀಷ್‌ಗೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ
, ಶುಕ್ರವಾರ, 11 ಏಪ್ರಿಲ್ 2014 (12:29 IST)
PR
PR
ಬೆಂಗಳೂರು: ಅನಾರೋಗ್ಯದ ಕಾರಣದ ಮೇಲೆ ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡ ಬಳಿಕ ಮಲೇಷ್ಯಾದಿಂದ ನೇರವಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ರೆಬೆಲ್ ಸ್ಟಾರ್ ಅಂಬರೀಷ್ ಬಂದಿಳಿದಿದ್ದಾರೆ. ಶುಕ್ರವಾರ ಅಂಬರೀಷ್ ಪತ್ನಿ ಸುಮಲತಾ ಜತೆ ಕೆಂಪೇಗೌಡ ವಿಮಾನನಿಲ್ದಾಣಕ್ಕೆ ಬಂದಿಳಿದಾಗ ಅಭಿಮಾನಿಗಳು , ಆಪ್ತರು ಭವ್ಯ ಸ್ವಾಗತ ನೀಡಿದ್ದಾರೆ. ಅಂಬರೀಷ್ ಬರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ದೇವನಹಳ್ಳಿ ವಿಮಾನನಿಲ್ದಾಣಕ್ಕೆ ಆಗಮಿಸಿ ಅಂಬರೀಷ್ ಆಗಮನಕ್ಕಾಗಿ ಕಾಯುತ್ತಿದ್ದರು. ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಶ್ವಾಸಕೋಶದ ಚಿಕಿತ್ಸೆ ಪಡೆಯುತ್ತಿದ್ದ ಅವರು ಆಸ್ಪತ್ರೆಯಿಂದ ಕಳೆದ ವಾರ ಬಿಡುಗಡೆಯಾಗಿ ಮಲೇಷ್ಯಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಅಂಬರೀಷ್ ಸಂಜೆ ವೇಳೆಗೆ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಅಂಬರೀಷ್ ಗುಣಮುಖರಾಗಿದ್ದರೂ ಮಂಡ್ಯದಲ್ಲಿ ರಮ್ಯಾ ಪರ ಬಹಿರಂಗ ಪ್ರಚಾರದಲ್ಲಿ ಭಾಗವಹಿಸುವುದು ಕಷ್ಟವೆಂದು ಹೇಳಲಾಗುತ್ತಿದೆ.

Share this Story:

Follow Webdunia kannada