ಹುಬ್ಬಳ್ಳಿ:ಲಾರಿ ಪಲ್ಟಿಯಾಗಿ ನಾಲ್ವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಸಾತೋಷಹೀದ್ ಬಳಿ ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರೆಲ್ಲ ಹುಬ್ಬಳ್ಳಿಯ ನಿವಾಸಿಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದರಸಾದಿಂದ ಸುಮಾರು 50ರಿಂದ 60ಮಕ್ಕಳು ಲಾರಿಯಲ್ಲಿ ಅಂಚಟಗೇರಿ ಮದರಸಾದಿಂದ ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದರು. ಕಲಘಟಗಾ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸುಮಾರು 15ರಿಂದ 20ಜನರನ್ನು ರಕ್ಷಿಸಲಾಗಿದ್ದು, 15ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.
ಚಾಲಕ ಸಡನ್ ಬ್ರೇಕ್ ಹಾಕಿದ್ದರಿಂದ ಲಾರಿ ಪಲ್ಟಿಯಾಗಿ ನಾಲ್ವರು ಮಕ್ಕಳು ಸ್ಥಳದಲ್ಲೇ ಸತ್ತಿದ್ದು, ಇನ್ನುಳಿದ 15ಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.