Webdunia - Bharat's app for daily news and videos

Install App

ವರದಕ್ಷಿಣೆ ಕಿರುಕುಳ: ಮಹಿಳೆಯ ಮೇಲೆ ಹಲ್ಲೆ ಮಾಡಿ ರಸ್ತೆಯಲ್ಲಿ ಬಿಸಾಡಿದರು!

Webdunia
ಶುಕ್ರವಾರ, 18 ಏಪ್ರಿಲ್ 2014 (12:24 IST)
PR
PR
ಹುಬ್ಬಳ್ಳಿ: ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಪತಿಯ ಮನೆಯವರು ಗರ್ಭಿಣಿ ಮಹಿಳೆಗೆ ಥಳಿಸಿ ಪ್ರಜ್ಞೆ ತಪ್ಪಿದ ಮಹಿಳೆಯನ್ನು ರಸ್ತೆಯಲ್ಲಿ ಬಿಸಾಡಿರುವ ಹೃದಯವಿದ್ರಾವಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಲ್ಪನಾ ಎಂಬಾಕೆಗೆ ಅವಳ ಪತಿ ಮಂಜುವಿನ ತಮ್ಮ ಮತ್ತು ತಾಯಿ ಇಬ್ಬರೂ ಸೇರಿ ಹಲ್ಲೆ ಮಾಡಿ ಅವಳು ಪ್ರಜ್ಞೆ ತಪ್ಪಿದ ಬಳಿಕ ಕಾರವಾರದ ಬೈಪಾಸ್ ರಸ್ತೆಯಲ್ಲಿ ಬಿಸಾಡುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. 2 ವರ್ಷಗಳ ಹಿಂದೆ ಮನೆಯಿಂದ ಬಂಗಾರ ತಗೊಂಡು ಬಾ ಅಂತೇಳಿ ಕಳಿಸಿದ್ದಾಗ ತಂದಿದ್ದೆ. ಮತ್ತೆ ನನಗೆ ಹೊಡೆದು ಬಂಗಾರ, ಎರಡು ಲಕ್ಷ ರೂ. ಹಣವನ್ನು ತೆಗೆದುಕೊಂಡು ಬಾ ಎಂದು ಹೇಳಿ ಬೆಲ್ಟ್‌ನಿಂದ ಹೊಡೆಯುತ್ತಿದ್ದರು.

ಆಹಾರವನ್ನು ಕೊಡದೇ ಸತಾಯಿಸುತ್ತಿದ್ದರು, ನಾಯಿಗಿಂತ ಕೀಳಾಗಿ ತನ್ನನ್ನು ನೋಡಿಕೊಳ್ಳುತ್ತಿದ್ದರು ಎಂದು ಕಲ್ಪನಾ ದೂರಿದ್ದಾಳೆ. 2 ವರ್ಷದ ಹಿಂದೆ ಮಂಜು ಎಂಬವನನ್ನು ಕಲ್ಪನಾ ಮದುವೆಯಾಗಿದ್ದರು. ಮದುವೆಯಾದಾಗಿನಿಂದ ತವರುಮನೆಯಿಂದ ಒಡವೆ, ಹಣ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಕಲ್ಪನಾ ದೂರಿನಲ್ಲಿ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments