Webdunia - Bharat's app for daily news and videos

Install App

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಿನ್ಸಿಪಾಲರ ವಿರುದ್ಧ ದೂರು

Webdunia
ಸೋಮವಾರ, 31 ಮಾರ್ಚ್ 2014 (19:54 IST)
ತುಮಕೂರು: ಇಲ್ಲಿನ ಗ್ರಾಮದ ಸರ್ಕಾರಿ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿನಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಲೈಂಗಿಕ ದೌರ್ಜನ್ಯದ ಕೇಸನ್ನು ಹಾಕಿದ್ದಾಳೆ. ಆರೋಪಿ ಪಾಂಡುರಂಗಯ್ಯ ಅವರನ್ನು ಇತ್ತೀಚೆಗೆ ಪಟ್ಟನಾಯಕನಹಳ್ಳಿ ಗ್ರಾಮದ ಸರ್ಕಾರಿ ಪಿಯು ಕಾಲೇಜಿಗೆ ಪ್ರಿನ್ಸಿಪಾಲ್ ಹುದ್ದೆಗೆ ಬಡ್ತಿ ನೀಡಲಾಗಿತ್ತು. ಕಾಲೇಜು ಸಮಾರಂಭದ ಸಂದರ್ಭದಲ್ಲಿ ಪ್ರಾಂಶುಪಾಲರು ಬಾಲಕಿಯನ್ನು ತಮ್ಮ ಕೊಠಡಿಗೆ ಕರೆಸಿಕೊಂಡು ಅವಳ ಜತೆ ಅಶ್ಲೀಲವಾಗಿ ವರ್ತಿಸಿದರು ಎಂದು ಪೊಲೀಸರು ಹೇಳಿದರು. ನಂತರ ಬಾಲಕಿಯನ್ನು ಸಮಾಧಾನಪಡಿಸಲು ಹಣದ ಆಮಿಷವೊಡ್ಡಿ ಬಾಯಿ ಮುಚ್ಚಿಕೊಂಡಿರುವಂತೆ ಹೇಳಿದರು. ನೀನು ಬಡವಿಯಾಗಿದ್ದರಿಂದ ನನಗೆ ಏನೂ ಮಾಡಲು ಆಗುವುದಿಲ್ಲ ಎಂದು ಹೆದರಿಸಿದ್ದರು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಪಾಂಡುರಂಗಯ್ಯ ಬಾಲಕಿಯ ತಂದೆಗೆ ಕೂಡ ಹಣದ ಆಮಿಷವನ್ನು ಒಡ್ಡಿದರು. ಆದರೆ ಅದನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದರು. ಈಗ ಪ್ರಾಂಶುಪಾಲರು ತಲೆತಪ್ಪಿಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಹುಡುಕುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ