ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾದ ತನಿಖೆ ನಡೆಯುತ್ತಿದ್ದು, ಶಂಕಿತ ನಾಲ್ವರು ಆರೋಪಿಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಹೇಳಿಕೆ ನೀಡಿದ ಉಡುಪಿ ಎಸ್ಪಿ ಬೋರಲಿಂಗಯ್ಯ, ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾದ ತನಿಖೆಯನ್ನು ಕೈಗೊಂಡಿದ್ದು, ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿದಂತೆ ಇಂದು ಉಡುಪಿಗೆ ಭೇಟಿ ನೀಡಿದ ಗೃಹ ಸಚಿವ ಕೆ.ಜೆ. ಜಾರ್ಜ್ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಾತನಾಡಿದ ಅವರು, ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ನಾನು ಆದೇಶಿಸಿದ್ದೇನೆ. ಸರಕಾರ ನಿಮ್ಮೊಂದಿಗಿದೆ ಎಂದು ಅತ್ಯಾಚಾರಕ್ಕೊಳಗಾದ ಯುವತಿಯ ಪೋಷಕರಿಗೆ