Webdunia - Bharat's app for daily news and videos

Install App

ವಿದ್ಯುತ್ ದರ ಏರಿಕೆ ಅನಿವಾರ್ಯ: ಶೋಭಾ ಕರಂದ್ಲಾಜೆ

Webdunia
ಬುಧವಾರ, 29 ಜೂನ್ 2011 (17:09 IST)
ರೈತರಿಗೆ ಉಚಿತ ವಿದ್ಯುತ್ ನೀಡಿಕೆ, ಕಲ್ಲಿದ್ದಲು ದರ ಏರಿಕೆಗಳಿಂದ ವಿದ್ಯುತ್ ಉತ್ಪಾದನಾ ವೆಚ್ಚ ಅಧಿಕವಾಗಿದ್ದು, ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದೆ ಎಂದು ಇಂಧನ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎನ್‌ಟಿಪಿಸಿ ಜತೆ ಕರ್ನಾಟಕ ವಿದ್ಯುತ್ ಕಂಪನಿ 100 ಮೆಗಾವ್ಯಾಟ್ ಪವನ ವಿದ್ಯುತ್ ಖರೀದಿಸುವ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಯೂನಿಟ್‌ಗೆ 88 ಪೈಸೆ ವಿದ್ಯುತ್ ದರ ಏರಿಸುವಂತೆ ಎಲ್ಲ ಎಸ್ಕಾಂಗಳು ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದರು.

ದರ ಏರಿಕೆ ನಿರ್ಧಾರ ಈಗ ಆಯೋಗದ ಕೈಯಲ್ಲಿದ್ದು, ಆಯೋಗ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದರು. ವಿದ್ಯುತ್ ಉತ್ಪಾದನಾ ದರದಲ್ಲಿ ಹೆಚ್ಚಳವಾಗಿರುವುದರಿಂದ ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕಳೆದ ಬಾರಿ ಸಹ ಆಯೋಗ 22 ಪೈಸೆಯಷ್ಟು ಮಾತ್ರ ದರ ಹೆಚ್ಚಿಸಿತ್ತು ಎಂದು ತಿಳಿಸಿದರು.

ಕೇಂದ್ರ ಸರಕಾರ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಗಳಾದ ಛತ್ತೀಸ್‌ಗಢ ಮತ್ತು ಬಳ್ಳಾರಿಯ 4ನೇ ಹಂತದ ವಿದ್ಯುತ್ ಉತ್ಪಾದನಾ ಯೋಜನೆಗಳಿಗೆ ಕಲ್ಲಿದ್ದಲು ಪೂರೈಕೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಾಗಾಗಿ ಪರಿಸರ ಇಲಾಖೆ ಅನುಮತಿ ನೀಡದಿರುವುದರಿಂದ ಈ ಯೋಜನೆಗಳ ಕಾಮಗಾರಿಗಳು ಆರಂಭವಾಗುವುದಕ್ಕೆ ವಿಳಂಬವಾಗುತ್ತಿರುವುದಾಗಿ ಹೇಳಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

Show comments