ವಿವಿಧ ಮುಖಂಡರ ಖಂಡನೆ ಬಳಿಕ ಸಿಎಂ ಉಲ್ಟಾ ಹೊಡೆದರು
, ಗುರುವಾರ, 3 ಏಪ್ರಿಲ್ 2014 (11:09 IST)
ಬೆಂಗಳೂರು: ಸಿಎಂರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ಜತೆಗೆ ಪರಮೇಶ್ವರ್ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಲಿ. ಇವರಿಬ್ಬರ ಹೇಳಿಕೆಗಳನ್ನು ಗಮನಿಸಿದರೆ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕೆನ್ನಿಸುತ್ತದೆ. ಒಬ್ಬರು ಮಾಜಿ ಪ್ರಧಾನಿಗಳ ಬಗ್ಗೆ ಇಬ್ಬರೂ ಮಾತನಾಡುತ್ತಾರೆ. ಇಬ್ಬರಿಗೂ ತಲೆ ಕೆಟ್ಟಿದೆ ಎಂದು ಮೈಸೂರಿನಲ್ಲಿ ಈಶ್ವರಪ್ಪ ವಾಗ್ದಾಳಿ ಮಾಡಿದ್ದಾರೆ. ಈ ನಡುವೆ ರೈತ ವಿಠ್ಠಲ್ ಆತ್ಮಹತ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ರೈತ ಮುಖಂಡ ಕೆ.ಎಸ್. ಪುಟ್ಟಣ್ಣಯ್ಯ ಖಂಡಿಸಿದ್ದಾರೆ. ಸಿಎಂ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ.
ಇದು ರಾಜ್ಯದ ರೈತರಿಗೆ ಮಾಡಿದ ಅಪಮಾನ.ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಏ.10ರೊಳಗೆ ಸಿಎಂ ಸಿದ್ದರಾಮಯ್ಯ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಏಪ್ರಿಲ್ 10ರಂದು ರೈತರ ಸಭೆ ನಡೆಸುತ್ತೇವೆ ಎಂದು ಪುಟ್ಟಣ್ಣಯ್ಯ ಹೇಳಿದರು. ರೈತನ ಬಗ್ಗೆ ಕೀಳಾಗಿ ಭಾಷಣ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುರುಬ ಸಮಾಜದವರು. ತಮ್ಮ ಸಮಾಜದ ಬಗ್ಗೆ ಸಿಎಂ ಕೀಳಾಗಿ ಮಾತನಾಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಎಲ್ಲೆ ಮೀರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.