Select Your Language

Notifications

webdunia
webdunia
webdunia
webdunia

ವಿಷಾಹಾರ ಸೇವನೆಯಿಂದ ಅಸ್ವಸ್ಥರಾದ ಶ್ರುತಿ

ವಿಷಾಹಾರ ಸೇವನೆಯಿಂದ ಅಸ್ವಸ್ಥರಾದ ಶ್ರುತಿ
, ಶನಿವಾರ, 13 ಜುಲೈ 2013 (18:39 IST)
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರುತಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಶಿರಡಿಗೆ ಭೇಟಿ ನೀಡಿ ವಾಪಸು ಬರುವಾಗ ರಸ್ತೆ ಬದಿಯ ಡಾಬಾದಲ್ಲಿ ಸೇವಿಸಿ ಊಟದಿಂದ ಫುಡ್ ಪಾಯ್ಸನ್ ಆಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು.ಶ್ರುತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಕೆಲವು ಕಾಲ ಹರಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಶ್ರುತಿ ನಾನು ಮಾನಸಿಕವಾಗಿ ನೊಂದಿದ್ದೇನೆ ನಿಜ.

ಆದರೆ ಕಷ್ಟಗಳಿಗೆ ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿ ನಾನಲ್ಲ. ಕಷ್ಟಗಳನ್ನು ಎದುರಿಸುವ ಆತ್ಮಸ್ಥೈರ್ಯ ನನ್ನಲ್ಲಿದೆ ಎಂದು ಶ್ರುತಿ ಹೇಳಿದ್ದಾರೆ. ಇತ್ತೀಚೆಗೆ ಪತ್ರಕರ್ತ ಚಂದ್ರಚೂಢ ಅವರನ್ನು ಶ್ರುತಿ ಎರಡನೇ ಮದುವೆಯಾಗಿದ್ದರು. ಚಂದ್ರಚೂಢ ತಮ್ಮ ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದುವೆಯಾಗಿದ್ದಾರೆಂಬ ಆರೋಪ ಕೇಳಿಬಂದಿತ್ತು. ಶ್ರುತಿ ತಮ್ಮ ದಾಂಪತ್ಯ ಜೀವನದಲ್ಲಿ ಬೇಸರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ವದಂತಿ ಹಬ್ಬಿತ್ತು.

Share this Story:

Follow Webdunia kannada