Webdunia - Bharat's app for daily news and videos

Install App

ವೈಷಮ್ಯಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ: ರೆಡ್ಡಿ

Webdunia
ಮಂಗಳವಾರ, 31 ಆಗಸ್ಟ್ 2010 (16:01 IST)
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೂದಿಹಳ್ಳಿಯ ಜಾತಿ ವೈಷಮ್ಯಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕರುಣಾಕರ ರೆಡ್ಡಿ ಮನವಿ ಮಾಡಿದರು.

ಪಟ್ಟಣದ ವೆಂಕಟೇಶ್ವರ ನಗರದ ಗುಡಿಸಲುಗಳಲ್ಲಿ ತಾತ್ಕಾಲಿಕವಾಗಿ ಆಶ್ರಯ ಪಡೆದಿರುವ ಬೂದಿಹಳ್ಳಿಯ ದಲಿತ ಕುಟುಂಬಗಳನ್ನು ಭೇಟಿ ಮಾಡಿ, ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

ಅಧಿಕಾರಿಗಳು ಕಾನೂನು ಪ್ರಕಾರವೇ ಕೆಲಸ ಮಾಡುತ್ತಾರೆ. ಇವರ ಶಿಫಾರಸಿನ ಆಧಾರದಲ್ಲೇ ನಿಮಗೆ ಸೌಲಭ್ಯ ನೀಡಲು 63 ಲಕ್ಷ ರೂ. ಸರಕಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಗಲಾಟೆ ನಡೆದು 9 ತಿಂಗಳು ಕಳೆದರೂ ಭೂಮಿ ಹಾಗೂ ಪುನರ್ವಸತಿ ಕಲ್ಪಿಸುವ ಕಾರ್ಯವಾಗಿಲ್ಲ ಎಂಬ ದೂರಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, 20 ಕುಟುಂಬಗಳಿಗೆ ಸೈಟ್ ಮಂಜೂರಾಗಿದ್ದು, ಯಾರೂ ಪಡೆದುಕೊಂಡಿಲ್ಲ ಎಂದು ಉತ್ತರಿಸಿದರು.

ಸಂತ್ರಸ್ತರಿಗೆ ನೀಡುವ ಭೂಮಿಯ ಕುರಿತು ಅಸಿಸ್ಟೆಂಟ್ ಕಮೀಷನರ್ ಹಾಗೂ ತಹಸೀಲ್ದಾರ್ ಸರ್ವೆ ಮಾಡಿ ಒಂದು ವರದಿ ತಯಾರಿಸುವಂತೆ ಸೂಚಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರ ಜತೆ ಚರ್ಚಿಸುವುದಾಗಿ ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments