Select Your Language

Notifications

webdunia
webdunia
webdunia
webdunia

ಶಾದಿ ಭಾಗ್ಯ ಜನರಿಗೆ ಮಕ್ಮಲ್ ಟೋಪಿ ಹಾಕುವ ಯೋಜನೆ: ಕುಮಾರಸ್ವಾಮಿ

ಶಾದಿ ಭಾಗ್ಯ ಜನರಿಗೆ ಮಕ್ಮಲ್ ಟೋಪಿ ಹಾಕುವ ಯೋಜನೆ: ಕುಮಾರಸ್ವಾಮಿ
, ಬುಧವಾರ, 20 ನವೆಂಬರ್ 2013 (13:42 IST)
PR
PR
ರಾಮನಗರ: ರಾಜ್ಯಸರ್ಕಾರ ಶಾದಿ ಭಾಗ್ಯ ಯೋಜನೆಯನ್ನು ಮುಸ್ಲಿಂ ಮಹಿಳೆಯರಿಗೆ ಜಾರಿ ಮಾಡುವ ವಿಚಾರವಾಗಿ ಮಾತನಾಡಿದ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಇದು ಜನರಿಗೆ ಮಕ್ಮಲ್ ಟೋಪಿ ಹಾಕುವ ಯೋಜನೆ ಎಂದು ತಿಳಿಸಿದರು. ಶಾದಿಭಾಗ್ಯದಿಂದ ಜನರಿಗೆ ಉಪಯೋಗವಿಲ್ಲ ಎಂದು ಅವರು ನುಡಿದರು. ಶಾದಿ ಭಾಗ್ಯ ಯೋಜನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವ ಪ್ರತಿ ಮುಸ್ಲಿಂ ದಂಪತಿಗೆ 50 ಸಾವಿರ ರೂ. ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು.

ಎಲ್ಲಾ ಜಿಲ್ಲೆಗಳಲ್ಲೂ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಣೆಯನ್ನು ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು ಈಗಿರುವ ಕಾಲೇಜುಗಳಿಗೆ ಸೂಕ್ತ ಸೌಲಭ್ಯಗಳಿಲ್ಲ. ಇನ್ನು ಹೊಸ ಮೆಡಿಕಲ್ ಕಾಲೇಜುಗಳಿಗೆ ಏನು ಸೌಕರ್ಯ ಕಲ್ಪಿಸುತ್ತಾರೆ ಎಂದು ಪ್ರಶ್ನಿಸಿದರು.

Share this Story:

Follow Webdunia kannada