Select Your Language

Notifications

webdunia
webdunia
webdunia
webdunia

ಸರ್ಕಾರದ ಧೋರಣೆಯಿಂದ ಗುತ್ತಿಗೆದಾರ ಆತ್ಮಹತ್ಯೆ: ಕುಮಾರಸ್ವಾಮಿ

ಸರ್ಕಾರದ ಧೋರಣೆಯಿಂದ ಗುತ್ತಿಗೆದಾರ ಆತ್ಮಹತ್ಯೆ: ಕುಮಾರಸ್ವಾಮಿ
, ಗುರುವಾರ, 28 ನವೆಂಬರ್ 2013 (12:22 IST)
PR
PR
ಬೆಳಗಾವಿ: ಬಿಬಿಎಂಪಿ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಸರ್ಕಾರದ ಧೋರಣೆಯೇ ಗುತ್ತಿಗೆದಾರನ ಆತ್ಮಹತ್ಯೆಗೆ ಕಾರಣವೆಂದು ತಿಳಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ಪಡೆದು ಅವರು ಕಾಮಗಾರಿ ನಡೆಸಿದ್ದರು. ಆದರೆ ಈಗಿನ ಸರ್ಕಾರ ಹಣ ಬಿಡುಗಡೆ ಮಾಡಿರಲಿಲ್ಲ. ಇದರಿಂದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬೆಳಗಾವಿಯಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ. ಸರ್ಕಾರದ ಈ ಧೋರಣೆಗಳು ತಪ್ಪಬೇಕು ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದರು.

46 ವರ್ಷ ವಯಸ್ಸಿನ, ಚಿಕ್ಕಬಿದರಕಲ್ಲು ನಿವಾಸಿ ಗಿರೀಶ್ ಎಂಬ ಗುತ್ತಿಗೆದಾರ ಮಂಗಳವಾರ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಬಿಎಂಪಿ ಕಾಮಗಾರಿಯನ್ನು ಪೂರೈಸಿದ ಗುತ್ತಿಗೆದಾರನಿಗೆ ಹಣ ಸಂದಾಯವಾಗದೇ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದರು. ಗಿರೀಶ್ ಖಾಸಗಿ ಮೂಲಗಳಿಂದ ಪಡೆದ ಸಾಲವನ್ನು ಮರುಪಾವತಿ ಮಾಡುವಂತೆ ತೀವ್ರ ಒತ್ತಡಕ್ಕೆ ಒಳಗಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.

Share this Story:

Follow Webdunia kannada