Select Your Language

Notifications

webdunia
webdunia
webdunia
webdunia

ಸಿಎಂ ರಾಜೀನಾಮೆಗೆ ಆಗ್ರಹಿಸಿ ‘ಕೈ’ ಪ್ರೊಟೆಸ್ಟ್​

ಸಿಎಂ ರಾಜೀನಾಮೆಗೆ ಆಗ್ರಹಿಸಿ ‘ಕೈ’ ಪ್ರೊಟೆಸ್ಟ್​
bangalore , ಶನಿವಾರ, 4 ಮಾರ್ಚ್ 2023 (14:46 IST)
ಲೋಕಾಯುಕ್ತ ರೇಡ್​ನಲ್ಲಿ ಬಿಜೆಪಿ ಶಾಸಕ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್​ ಮಾಡಾಳ್​ ಸಿಕ್ಕಿಬಿದ್ದ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ.. ಇದು ಚುನಾವಣಾ ಹೊತ್ತಲ್ಲಿ ಪ್ರತಿಪಕ್ಷಗಳಿಗೆ ಸಿಕ್ಕ ದೊಡ್ಡ ಅಸ್ತ್ರವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸಿದೆ. ಕಾಂಗ್ರೆಸ್​ ನಾಯಕರು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​ ರಾಜ್ಯ ಉಸ್ತುವಾರಿ ರಣ್​ದೀಪ್ ಸಿಂಗ್​​ ಸುರ್ಜೇವಾಲಾ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ಪ್ರಿಯಾಂಕ್​ ಖರ್ಗೆ ಭಾಗಿಯಾಗಿದ್ದರು. ಸಿಎಂ ಬಸವರಾಜ​ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ರು.. ಮಾರ್ಗಮಧ್ಯದಲ್ಲೇ ಕಾರ್ಯಕರ್ತರನ್ನ ಪೊಲೀಸರು ತಡೆದರು. ರಾಮಲಿಂಗಾರೆಡ್ಡಿ ಸೇರಿ ಹಲವರನ್ನ ಪೊಲೀಸರು ವಶಕ್ಕೆ ಪಡೆದರು.

Share this Story:

Follow Webdunia kannada

ಮುಂದಿನ ಸುದ್ದಿ

ತೆರೆದ ವಾಹನದಲ್ಲಿ ಎಚ್‌ಡಿಡಿ 100 ಕಿ.ಮೀ. ರೋಡ್ ಶೋ