ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋನಿಯಾಗಾಂಧಿಗೆ ಅಭ್ಯರ್ಥಿಗಳ ಪಟ್ಟಿ ರವಾನೆಯಾಗಿದೆ ಎಂದು ಹೇಳಿದ್ದಾರೆ. ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಭಾಗಿಯಾಗುವೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಭಾಗವಹಿಸಲಿದ್ದು, ಕೇಂದ್ರ ಸಚಿವ ವಯಲಾರ್ ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ರಾಜ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಅಡ್ವಾಣಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ 100ಕ್ಕೂ ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು ಅಡ್ವಾಣಿ ಹೇಳಿದರು. ಹೀಗಾಗಿ ಕಾಂಗ್ರೆಸ್ ತೃತೀಯ ರಂಗದತ್ತ ವಾಲಿದೆ ಎಂದೂ ಅವರು ಹೇಳಿದ್ದಾರೆ.