Webdunia - Bharat's app for daily news and videos

Install App

ಸ್ಥಾನಮಾನ ಕೇಳೋರು ಪ್ರಚಾರಕ್ಕೆ ಬರ್ತಿಲ್ಲ: ಡಿಕೆಶಿ

Webdunia
ಬುಧವಾರ, 24 ಡಿಸೆಂಬರ್ 2008 (14:19 IST)
NRB
ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರಲು ಕುಂಟುನೆಪ ಹೇಳುತ್ತಿರುವವರ ವಿರುದ್ಧ ಇಂದಲ್ಲ ನಾಳೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

ಅರಬಾವಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾರು. "ಅಧಿಕಾರ ಅನುಭವಿಸಲು, ಸ್ಥಾನಮಾನ ಕಾಪಾಡಿಕೊಳ್ಳಲು ಪಕ್ಷ ಬೇಕು. ಆದರೆ, ಪಕ್ಷಕ್ಕಾಗಿ ದುಡಿಯಲು ಆಗುವುದಿಲ್ಲ ಅಂದರೆ ಹೇಗೆ?" ಎಂದು ಪ್ರಶ್ನಿಸಿದರು.

" ಒಂದಿಬ್ಬರು ಕಾಂಗ್ರೆಸ್ಸಿಗರು ಹೀಗೆ ಮಾಡಿದ್ದಾರೆ. ತಮ್ಮ ಸಹೋದರನಿಗೆ ಅಧಿಕಾರ ಸಿಗಲಿ ಎಂದೇನಾದರೂ ಅವರು ಈ ರೀತಿ ಮಾಡಿದರೇ ಎಂಬುದು ಈಗ ಪ್ರಶ್ನೆಯಾಗಿದೆ. ಅದು ಮುಂದಿನ ದಿನಗಳಲ್ಲಿ ಗೊತ್ತಾಗಲಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದು ನಿಶ್ಚಿತ" ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿ ಜಿಲ್ಲೆ ಅರಬಾವಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವಿವೇಕರಾವ್ ಪಾಟೀಲ್ ಪರ ಮೂಡಲಗಿ ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರಚಾರ ಸಭೆಯ ವೇಳೆ ಅವರು ಈ ಎಚ್ಚರಿಕೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments