Select Your Language

Notifications

webdunia
webdunia
webdunia
webdunia

ಸ್ಪೀಕರ್‌ ವಿಷಯ ಮುಗಿದ ಅಧ್ಯಾಯ: ಸದಾನಂದ ಗೌಡ

ಸ್ಪೀಕರ್‌ ವಿಷಯ ಮುಗಿದ ಅಧ್ಯಾಯ: ಸದಾನಂದ ಗೌಡ
ಬೆಂಗಳೂರು , ಭಾನುವಾರ, 29 ಜನವರಿ 2012 (12:04 IST)
WD
ಸ್ಪೀಕರ್‌ ವಿಚಾರ ಮುಗಿದ ಅಧ್ಯಾಯ ಪ್ರತಿಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಭಾನುವಾರ ಹೇಳಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸ್ಪೀಕರ್‌ ಕೆ.ಜಿ.ಬೋಪಯ್ಯ ಅವರು ಶಾಸಕರ ಅನರ್ಹತೆಗೊಳಿಸಿದ್ದ ನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಕಾಂಗ್ರೆಸ್‌ ಮೊದಲಾದ ಪ್ರತಿಪಕ್ಷಗಳು ಪಕ್ಷಪಾತ ಧೋರಣೆ ಅನುಸರಿಸುತ್ತಿರುವ ಬೋಪಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.

ಜನವರಿ 30ರಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಪ್ರತಿಪಕ್ಷಗಳಿಗೆ ಸದಾನಂದಗೌಡ ಮನವಿ ಮಾಡಿದ್ದಾರೆ.

Share this Story:

Follow Webdunia kannada