Webdunia - Bharat's app for daily news and videos

Install App

ಹತ್ತಿ ಬೆಳೆದ ರೈತ ಅಧೋಗತಿ : ಮೈಕೋ ಕಂಪೆನಿ ವಿರುದ್ಧ ರೈತರ ಆಕ್ರೋಷ.

Webdunia
ಗುರುವಾರ, 31 ಅಕ್ಟೋಬರ್ 2013 (16:32 IST)
PR
PR
ಜಿಲ್ಲೆಯ ರೈತ ಬಾಂಧವರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದ್ರಲ್ಲೂ ದಾವಣಗೆರೆಯಲ್ಲಿನ ಹತ್ತಿ ಬೆಳೆಗಾರರು ಮಾತ್ರ ಎಲ್ಲಿಲ್ಲದ ಸಂಕಷ್ಟವನ್ನು ಎದುರಿಸುವಂತಾಗಿದೆ. ರೈತರು ಬೆಳೆದ ಹತ್ತಿ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಇದಕ್ಕೆ ಮೂಲ ಕಾರಣ ಕಳಪೆ ಗುಣಮಟ್ಟದ ಹತ್ತಿ ಬೀಜಗಳು ಎಂದು ತಿಳಿದು ಬಂದಿದೆ. ಹೀಗಾಗಿ ಹತ್ತಿ ಬೀಜಗಳನ್ನು ನೀಡಿದ ಮೈಕೋ ಕಂಪೆನಿಯ ವಿರುದ್ಧ ಇದೀಗ ರೈತರು ಆಕ್ರೋಷವನ್ನು ವ್ಯಕ್ತಪಡಿಸುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ಪ್ರತಿಬಟನೆಯನ್ನು ನಡೆಸುತ್ತಿದ್ದಾರೆ.

ದಾವಣೆಗೆರೆ ಜಿಲ್ಲೆ ಸೆರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಹತ್ತಿ ಬೆಳೆಗೆ ಯೋಗ್ಯವಾದ ಪ್ರದೇಶಗಳಾಗಿವೆ. ಹೀಗಾಗಿಯೇ ಇಲ್ಲಿ ಅನೇಕ ಹತ್ತಿ ಗಿರಣಿಗಳು ಸ್ಥಾಪನೆಗೊಂಡಿವೆ. ಆದ್ರೆ ಮೈಕೋ ಕಂಪೆನಿ ನೀಡಿದ ಕಳಪೆ ಗುಣಮಟ್ಟದ ಹತ್ತಿ ಬೀಜಗಳಿಂದಾಗಿ ಹತ್ತಿ ಗಿಡಗಳು ಕಾಯಿಯನ್ನೇ ಬಿಟ್ಟಿಲ್ಲ. ಇದರಿಂದಾಗಿ ರೈತರು ಕಂಗಾಲಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದಾಗ "ಎಸ್‌ವಿ ಪಾಟೀಲ್‌ ಅವರ ನೇತೃತ್ವದ ತಜ್ಞರ ತಂಡ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆಗ ಹತ್ತಿ ಬೀಜದ ಕಳಪೆ ಗುಣಮಟ್ಟವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.

ಮೈಕೋ ಸಂಸ್ಥೆ ನೀಡಿದ ಈ ಕಳಪೆ ಹತ್ತಿ ಬೀಜಗಳಿಂದಾಗಿ ರೈತರಿಗೆ ನಷ್ಟವಾಗಿದ್ದು ಈ ಸಂಬಂಧ ಜಿಲ್ಲಾಡಳಿತ ಮೈಕೋ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಅಗ್ರಹಿಸಿದ್ದಾರೆ. ಅಷ್ಟೆ ಅಲ್ಲ, ಹಾನಿಗೀಡಾದ ರೈತರಿಗೆ ಪ್ರತಿ ಎಕರೆಗೆ 75 ಸಾವಿರದಿಂದ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪ್ರತಿಭಟನಾ ನಿರತ ರೈತರು ಆಗ್ರಹಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments