Webdunia - Bharat's app for daily news and videos

Install App

ಹಾಸನದಲ್ಲಿ ಮುಂದುವರಿದ ಮಳೆ ಅಬ್ಬರ

Webdunia
ಶುಕ್ರವಾರ, 12 ಆಗಸ್ಟ್ 2022 (17:51 IST)
ಮಲೆನಾಡು ಭಾಗದಲ್ಲಿ ಮುಂದುವರೆದ ಭಾರೀ ಮಳೆ ಅಬ್ಬರದಿಂದ ಹಾಸನ‌ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜಂಬರಡಿ ಕಿರು ಸೇತುವೆ ಜಲಾವೃತವಾಗಿದೆ. ಮಳೆ ಅವಾಂತರದಿಂದ ಚಿತ್ತನ ಹಳ್ಳ ಉಕ್ಕಿ ಹರಿದು ರಸ್ತೆ ಮೇಲೆ ನೀರು ಹರಿಯುತ್ತಿದೆ. ನೆನ್ನೆ ಭಾರಿ ಪ್ರಮಾಣದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಗ್ರಾಮಸ್ಥರು ಶಾಲಾ ಮಕ್ಕಳನ್ನ ಜೆಸಿಬಿ ಮೂಲಕ ರಸ್ತೆ ದಾಟಿಸಿದ್ದಾರೆ. ಪ್ರವಾಹ ಮುಂದುವರೆದ ಹಿನ್ನೆಲೆ  ಮುಂಜಾಗ್ರತಾ ಕ್ರಮವಾಗಿ ಇಂದು ಸಕಲೇಶಪುರ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸತತವಾಗಿ 12 ದಿನಗಳಿಂದ ಅಬ್ಬರಿಸುತ್ತಿರೋ ಮಳೆಯಿಂದ ಚಿತ್ತನ ಹಳ್ಳ ಉಕ್ಕಿ ಹರಿದ ಪರಿಣಾಮ‌ ಹಾನಬಾಳು ಮತ್ತು ಜಂಬರಡಿ, ರಾಗಿಗುಡ್ಡ ನಡುವೆ ಸಂಚರಿಸಲು ಜನರ ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments