ಬೆಂಗಳೂರು: ತುಘಲಕ್ ಪಾತ್ರದಿಂದ ಅಭಿಮಾನಿಗಳ ಮನ ಗೆದ್ದಿರುವ ರಂಗಕರ್ಮಿ, ಹಿರಿಯ ನಟ ಸಿ.ಆರ್. ಸಿಂಹ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ. ಅ ವರನ್ನು ಬೆಂಗಳೂರಿನ ಬನಶಂಕರಿ ಸೇವಾ ಕ್ಷೇತ್ರ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇವತ್ತಿನ ಆಸ್ಪತ್ರೆ ಮೂಲಗಳ ಪ್ರಕಾರ ಅವರ ಸ್ಥಿತಿ ತೀರಾ ಚಿಂತಾಜನಕವಾಗಿದೆ. ಸಿಂಹರನ್ನು ಪ್ರಾಸ್ಟೇಟ್ ಕ್ಯಾನ್ಸರ್ ಮಹಾಮಾರಿ ಬಾಧಿಸುತ್ತಿದ್ದು, ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿದ್ದು, ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ವೈದ್ಯರು ಕೂಡ ಯಾವುದನ್ನೂ ಖಚಿತವಾಗಿ ಹೇಳುತ್ತಿಲ್ಲ ಎಂದು ಸಿ.ಆರ್. ಸಿಂಹ ಪತ್ನಿ ಶಾರದಾ ಹೇಳಿದ್ದಾರೆ.