Select Your Language

Notifications

webdunia
webdunia
webdunia
webdunia

ಹಿರೇಮಠ್ ವಿರುದ್ಧ ಒಂದು ಕೋಟಿ ರೂ.ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ

ಹಿರೇಮಠ್ ವಿರುದ್ಧ ಒಂದು ಕೋಟಿ ರೂ.ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ
, ಮಂಗಳವಾರ, 25 ಫೆಬ್ರವರಿ 2014 (12:31 IST)
PR
PR
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮಾಜಪರಿವರ್ತನ ಸಂಘದ ಅಧ್ಯಕ್ಷ ಎಸ್.ಆರ್. ಹಿರೇಮಠ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಸುಳ್ಳು ಪ್ರಚಾರದಿಂದ ಜನಪ್ರತಿನಿಧಿಗಳಿಗೆ ಸಾಕಷ್ಟು ಸಮಸ್ಯೆಯಾಗ್ತಿದೆ. ಆದ್ದರಿಂದ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂಬ ಮಾನನಷ್ಟ ಮೊಕದ್ದಮೆಯನ್ನು ಎಂಟನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿದ್ದು, ಮುಂದಿನ ತಿಂಗಳು ವಿಚಾರಣೆಗೆ ಎತ್ತಿಕೊಳ್ಳಲಾಗುತ್ತದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ಹಿರೇಮಠ್ ಸುಳ್ಳು ಆಪಾದನೆ ಮಾಡ್ತಿದ್ದಾರೆ. ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ನನಗೆ ಮಾನಹಾನಿ ಆಗುತ್ತಿದೆ ಎಂದು ರಮೇಶ್ ಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಹಿರೇಮಠ್ ಅವರನ್ನು ಕೇಳಿದಾಗ, ಎಲ್ಲದ್ದಕ್ಕೂ ನಾವು ತಯಾರಿದ್ದೇನೆ ಎಂದು ಹೇಳಿದ್ದಾರೆ.

ನಾನು ಗಂಭೀರವಾದಂತ ದಾಖಲಾತಿಗಳನ್ನು ಬಿಡುಗಡೆ ಮಾಡಿದ್ದೇನೆ. ಯಾರು 10 ವರ್ಷಕ್ಕೂ ಹೆಚ್ಚು ಕಾಲ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಅವರ ವಿರುದ್ಧ ಕ್ರಮಕ್ಕೆ ನಮ್ಮ ಹೋರಾಟ ಎಂದು ಹಿರೇಮಠ್ ಹೇಳಿದರು.

Share this Story:

Follow Webdunia kannada