Select Your Language

Notifications

webdunia
webdunia
webdunia
webdunia

ಹೈ-ಕ ವಿಶೇಷ ಸ್ಥಾನಮಾನ ನೀಡದಿದ್ರೆ ರಾಜೀನಾಮೆ: ಧರಂಸಿಂಗ್

ಹೈ-ಕ ವಿಶೇಷ ಸ್ಥಾನಮಾನ ನೀಡದಿದ್ರೆ ರಾಜೀನಾಮೆ: ಧರಂಸಿಂಗ್
ಬೆಂಗಳೂರು , ಶುಕ್ರವಾರ, 27 ಜನವರಿ 2012 (10:21 IST)
PR
ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಲಂ 371ರ ಅನ್ವಯ ವಿಶೇಷ ಸ್ಥಾನಮಾನ ನೀಡದಿದ್ದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೀದರ ಸಂಸದ ಧರ್ಮಸಿಂಗ್ ಹೇಳಿದ್ದಾರೆ.

ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಐದು ಜಿಲ್ಲೆಗಳಲ್ಲಿ ಬಂದ್ ಆಚರಿಸಿದ್ದರಿಂದ ಕೊನೆಗೂ ಸಂಸದ ಧರ್ಮಸಿಂಗ್ ಅವರಿಗೆ ಬಿಸಿ ಮುಟ್ಟಿಸಿದಂತಾಗಿದೆ.

ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ರಾಜ್ಯಗಳ ಚುನಾವಣೆ ನಂತರ ಹೈದ್ರಾಬಾದ್ ಕರ್ನಾಟಕ ಭಾಗದ ಬೇಡಿಕೆ ಕುರಿತಂತೆ ಕೇಂದ್ರ ಸರಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಗೃಹ ಸಚಿವ ಚಿದಂಬರಂ ಹಾಗೂ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಒಂದು ವೇಳೆ ಬೇಡಿಕೆ ಈಡೇರದಿದ್ದಲ್ಲಿ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗುವುದಾಗಿ ಸಂಸದ ಧರ್ಮಸಿಂಗ್ ತಿಳಿಸಿದ್ದಾರೆ.

Share this Story:

Follow Webdunia kannada