Select Your Language

Notifications

webdunia
webdunia
webdunia
webdunia

ಹೊಸ ಪಕ್ಷದ ಬಗ್ಗೆ ಬಿಎಸ್‌ವೈ ಉತ್ತರಿಸ್ಬೇಕು: ಪುಟ್ಟಸ್ವಾಮಿ

ಹೊಸ ಪಕ್ಷದ ಬಗ್ಗೆ ಬಿಎಸ್‌ವೈ ಉತ್ತರಿಸ್ಬೇಕು: ಪುಟ್ಟಸ್ವಾಮಿ
ಅರಸೀಕೆರೆ , ಶುಕ್ರವಾರ, 5 ಅಕ್ಟೋಬರ್ 2012 (11:23 IST)
PR
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಕಟ್ಟಿ ಬೆಳೆಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಶ್ರಮವಹಿಸಿದ್ದಾರೆ. ಈಗ ಹೊಸ ಪಕ್ಷ ಕಟ್ಟುವ ಬಗ್ಗೆ ಅವರೇ ಉತ್ತರಿಸಬೇಕಾಗಿದೆ ಎಂದು ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.

ಯಡಿಯೂರಪ್ಪ 40 ವರ್ಷಗಳಿಂದ ಬಿಜೆಪಿ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ್ದಾರೆ. ಆದರೆ ಪಕ್ಷ ಅವರನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿದೆ. ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಕೆ.ಎಸ್.ಈಶ್ವರಪ್ಪನವರೇ ಅಧ್ಯಕ್ಷರಾಗಿ ಮುಂದುವರಿದರೆ ಯಡಿಯೂರಪ್ಪನವರಿಗೆ ಟಿಕೆಟ್ ನೀಡದಿರುವ ಸಾಧ್ಯತೆಯೂ ಇದೆ. ಹಾಗಾಗಿ ಯಡಿಯೂರಪ್ಪ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ದರಿರುವುದಾಗಿ ಹೇಳಿದರು.

Share this Story:

Follow Webdunia kannada