Select Your Language

Notifications

webdunia
webdunia
webdunia
webdunia

‘ಕೈ’ ಮುಖಂಡರಿಂದ ನೀತಿ ಸಂಹಿತೆ ಉಲ್ಲಂಘನೆ

‘ಕೈ’ ಮುಖಂಡರಿಂದ ನೀತಿ ಸಂಹಿತೆ ಉಲ್ಲಂಘನೆ
ಶಿವಮೊಗ್ಗ , ಸೋಮವಾರ, 3 ಏಪ್ರಿಲ್ 2023 (21:10 IST)
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಮುಖಂಡರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.. ಶಿವಮೊಗ್ಗದ ಸೋಮಿನಕೊಪ್ಪದ ಬೋವಿ ಕಾಲೋನಿಯ ಆಂಜನೇಯ ಸ್ವಾಮಿ‌ ದೇವಸ್ಥಾನದಲ್ಲಿ ಯುವ ಕಾಂಗ್ರೆಸ್​​ ಸಭೆ ನಡೆಸಿದ್ದು, ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಗಿದೆ. ದೇವಸ್ಥಾನಗಳು ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತ.. ಆದರೆ ದೇವಸ್ಥಾನದಲ್ಲಿ ರಾಜಕೀಯ ಚಟುವಟಿಕೆ ನಡೆಸುವ ಮೂಲಕ ಧಾರ್ಮಿಕ ಸ್ಥಳ ದುರುಪಯೋಗ ಮಾಡಿಕೊಂಡಿದ್ದಾರೆ. ಹೀಗೆಂದು ಆರೋಪಿಸಿ ಚುನಾವಣಾ ಅಧಿಕಾರಿಗಳು, ಯುವ ಕಾಂಗ್ರೆಸ್ ಮುಖಂಡರಾದ ರಂಗನಾಥ್, ಗಿರೀಶ್, ಲೋಕೇಶ್ ಹಾಗೂ ಮೋಹನ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ M.S. ಸೋಮಲಿಂಗಪ್ಪ ವಿರುದ್ಧ ಭಿನ್ನಮತ