‘ಗೌರಿ ಲಂಕೇಶ್ ಭದ್ರತೆ ಕೇಳಿರಲಿಲ್ಲ, ಅದಕ್ಕೇ ಕೊಟ್ಟಿರಲಿಲ್ಲ’

Webdunia
ಸೋಮವಾರ, 11 ಸೆಪ್ಟಂಬರ್ 2017 (10:30 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 
ಪತ್ರಕರ್ತೆ ಗೌರಿ ಲಂಕೇಶ್ ಗೆ ಸೂಕ್ತ ಭದ್ರತೆ ಒದಗಿಸದೇ ಇರುವುದಕ್ಕೆ ಅವರ ಹತ್ಯೆಯಾಗಿದೆ ಎಂದು ರವಿಶಂಕರ್ ಪ್ರಸಾದ್ ಆರೋಪಿಸಿದ್ದರು. ಆಕೆ ಯಾವತ್ತೂ ಭದ್ರತೆ ಬೇಕೆಂದು ಕೇಳಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ಕೇಂದ್ರ ಸಚಿವರು ರಾಜ್ಯ ಸರ್ಕಾರಕ್ಕೆ ಗೌರಿಗೆ ಬೆದರಿಕೆ ಇತ್ತು ಎಂದು ಗೊತ್ತಿದ್ದೂ ಭದ್ರತೆ ಒದಗಿಸಿರಲಿಲ್ಲ ಎಂದು ಹೇಳಿದ್ದಾರೆ. ಇದು ಕೇಂದ್ರ ಸಚಿವರಾಗಿದ್ದುಕೊಂಡು ಅದರಲ್ಲೂ ಕಾನೂನು ಸಚಿವರಾಗಿದ್ದುಕೊಂಡು ಹೇಳಿರುವ ಬೇಜವಾಬ್ದಾರಿಯುತ ಹೇಳಿಕೆ’ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಯಾರಾದರೂ ಭದ್ರತೆ ಬೇಕೆಂದು ಕೇಳಿದಾಗ ಖಂಡಿತಾ ಕೊಡುತ್ತೇವೆ. ಇದರಲ್ಲಿ ಯಾರೂ ಹೊರತಲ್ಲ. ಆಕೆ ಯಾವತ್ತೂ ಕೇಳಿರಲಿಲ್ಲ.ಅದಕ್ಕೇ ಕೊಟ್ಟಿರಲಿಲ್ಲ’ ಎಂದು ಸಿಎಂ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ.. ಕೆಲಸ ಮಾಡದ ಅಧಿಕಾರಿಗಳಿಗೆ ರಿಟೈರ್ ಮೆಂಟ್ ಯೋಗ ಕರುಣಿಸಿದ ಸಿಎಂ ಯೋಗಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ವಾಯುಮಾಲಿನ್ಯ ತಡೆಗೆ ಟಫ್‌ ರೂಲ್ಸ್‌ ಜಾರಿ: ವಾಹನಗಳಿಗೆ ಇಂಧನ ಬೇಕಿದ್ದರೆ ಈ ಪ್ರಮಾಣಪತ್ರ ಕಡ್ಡಾಯ

ವಿಜಯೇಂದ್ರ ಕಲೆಕ್ಷನ್ ಕಿಂಗ್, ಅವರಪ್ಪನ ಹೆಸರು ಕೆಡಿಸಿದ್ರು ಎಲ್ಲಾ ಬಿಚ್ಚಿಡಲಾ: ಡಿಕೆ ಶಿವಕುಮಾರ್ ಕ್ಲಾಸ್

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ: ಬಿ.ವೈ.ವಿಜಯೇಂದ್ರ ಪ್ರಶ್ನೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಇಳಿಕೆ

ಜವಹರಲಾಲ್ ನೆಹರೂ ದಾಖಲೆಗಳ ಪೆಟ್ಟಿಗೆಗಳು ಸೋನಿಯಾ ಗಾಂಧಿ ಬಳಿ: ಸಂಸತ್ ನಲ್ಲಿ ಸಚಿವ ಗಜೇಂದ್ರ ಸಿಂಗ್ ಬಾಂಬ್

ಮುಂದಿನ ಸುದ್ದಿ
Show comments