Webdunia - Bharat's app for daily news and videos

Install App

‘ಗೌರಿ ಲಂಕೇಶ್ ಭದ್ರತೆ ಕೇಳಿರಲಿಲ್ಲ, ಅದಕ್ಕೇ ಕೊಟ್ಟಿರಲಿಲ್ಲ’

Webdunia
ಸೋಮವಾರ, 11 ಸೆಪ್ಟಂಬರ್ 2017 (10:30 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 
ಪತ್ರಕರ್ತೆ ಗೌರಿ ಲಂಕೇಶ್ ಗೆ ಸೂಕ್ತ ಭದ್ರತೆ ಒದಗಿಸದೇ ಇರುವುದಕ್ಕೆ ಅವರ ಹತ್ಯೆಯಾಗಿದೆ ಎಂದು ರವಿಶಂಕರ್ ಪ್ರಸಾದ್ ಆರೋಪಿಸಿದ್ದರು. ಆಕೆ ಯಾವತ್ತೂ ಭದ್ರತೆ ಬೇಕೆಂದು ಕೇಳಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ಕೇಂದ್ರ ಸಚಿವರು ರಾಜ್ಯ ಸರ್ಕಾರಕ್ಕೆ ಗೌರಿಗೆ ಬೆದರಿಕೆ ಇತ್ತು ಎಂದು ಗೊತ್ತಿದ್ದೂ ಭದ್ರತೆ ಒದಗಿಸಿರಲಿಲ್ಲ ಎಂದು ಹೇಳಿದ್ದಾರೆ. ಇದು ಕೇಂದ್ರ ಸಚಿವರಾಗಿದ್ದುಕೊಂಡು ಅದರಲ್ಲೂ ಕಾನೂನು ಸಚಿವರಾಗಿದ್ದುಕೊಂಡು ಹೇಳಿರುವ ಬೇಜವಾಬ್ದಾರಿಯುತ ಹೇಳಿಕೆ’ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಯಾರಾದರೂ ಭದ್ರತೆ ಬೇಕೆಂದು ಕೇಳಿದಾಗ ಖಂಡಿತಾ ಕೊಡುತ್ತೇವೆ. ಇದರಲ್ಲಿ ಯಾರೂ ಹೊರತಲ್ಲ. ಆಕೆ ಯಾವತ್ತೂ ಕೇಳಿರಲಿಲ್ಲ.ಅದಕ್ಕೇ ಕೊಟ್ಟಿರಲಿಲ್ಲ’ ಎಂದು ಸಿಎಂ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ.. ಕೆಲಸ ಮಾಡದ ಅಧಿಕಾರಿಗಳಿಗೆ ರಿಟೈರ್ ಮೆಂಟ್ ಯೋಗ ಕರುಣಿಸಿದ ಸಿಎಂ ಯೋಗಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments