Webdunia - Bharat's app for daily news and videos

Install App

‘ಶಶಿಕಲಾರಿಂದ ಒಂದು ಬಿಸ್ಕಟ್ ಕೂಡಾ ತೆಗೆದುಕೊಂಡಿಲ್ಲ’

Webdunia
ಗುರುವಾರ, 13 ಜುಲೈ 2017 (11:25 IST)
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ನಟರಾಜನ್ ಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂಬ ಕಾರಾಗೃಹ ಉಪಮಹಾ ನಿರೀಕ್ಷಕಿ ರೂಪಾ ಅವರ ಆರೋಪಗಳನ್ನು ಡಿಜಿಪಿ ಸತ್ಯನಾರಾಯಣ ತಳ್ಳಿ ಹಾಕಿದ್ದಾರೆ.


ಶಶಿಕಲಾರಿಂದ 2 ಕೋಟಿ ರೂ. ಲಂಚ ಪಡೆದಿದ್ದಾರೆಂಬ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸತ್ಯನಾರಾಯಣ ‘ನನ್ನ ಬಗ್ಗೆ ಮಾಧ್ಯಮಗಳಲ್ಲಿ ಬೇಕಾಬಿಟ್ಟಿ ಮಾತನಾಡಲು ರೂಪಾ ಯಾರು? ಶಶಿಕಲಾರಿಂದ ನಾನು 2 ಕೋಟಿಯಲ್ಲ, ಒಂದು ಬಿಸ್ಕತ್ತನ್ನೂ ಪಡೆದಿಲ್ಲ’ ಎಂದು ಸತ್ಯನಾರಾಯಣ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಸತ್ಯನಾರಾಯಣ ನನ್ನ ಮೇಲಿನ ಆರೋಪಗಳ ತನಿಖೆಗೆ ಸಿದ್ಧ ಎಂದಿದ್ದಾರೆ. ನನ್ನ ವಿರುದ್ಧ ರೂಪಾ ಪಿತೂರಿ ನಡೆಸಿದ್ದಾರೆ ಎಂದು ಅವರು ತಿರುಗೇಟು ನೀಡಿದ್ದಾರೆ. ಅತ್ತ ಡಿಐಜಿ ರೂಪಾ ಕೂಡಾ ತನಿಖೆಯಾಗಲಿ ಎಂದಿದ್ದಾರೆ. ಅಂತೂ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ನಡುವಿನ ವೈಯಕ್ತಿಕ ಸಮರದಿಂದಾಗಿ ಪೊಲೀಸ್ ಇಲಾಖೆಯ ಮಾನ ಹರಾಜಾಗುತ್ತಿರುವುದಂತೂ ಸುಳ್ಳಲ್ಲ.

ಇದನ್ನೂ ಓದಿ.. ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಯ್ಕೆ ಹಿಂದಿದೆಯಾ ದೊಡ್ಡ ರಹಸ್ಯ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments