Webdunia - Bharat's app for daily news and videos

Install App

ಅಧಿಕಾರಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ?

Webdunia
ಸೋಮವಾರ, 12 ಸೆಪ್ಟಂಬರ್ 2022 (08:20 IST)
ಮೈಸೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಅವರಿಂದು 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಾರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಆಡಿಯೊ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ.

ಸಾ.ರಾ ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಹೇಳಿದ್ದಾರೆ. 

ನನಗೆ ಆದ ಅನ್ಯಾಯದ ವಿರುದ್ಧ ನ್ಯಾಯ ಸಿಗುವವರೆಗೂ ಹೋರಾಡುತ್ತೇನೆ. ರಾಜಕಾರಣದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಆದರೆ ಎಲ್ಲರೂ ಭ್ರಷ್ಟರಲ್ಲ. ಇವರು ಎಲ್ಲರನ್ನೂ ಭ್ರಷ್ಟರೆಂದು ಬಿಂಬಿಸಲು ಯತ್ನಿಸುತ್ತಾರೆ. ಇಂಥವರ ಮುಖವಾಡ ಕಳಚುತ್ತೇನೆ ಎಂದು ಸವಾಲು ಹಾಕಿದ್ದಾರೆ.

ನಂತರ ಸಾರಾ ಮಹೇಶ್ ಅವರ ಪರ ವಕೀಲ ಅರುಣ್ ಕುಮಾರ್ ಮಾತನಾಡಿ, ಮಾನನಷ್ಟ ಮೊಕದ್ದಮೆ ಹೂಡುವ ಮುನ್ನಾ ರೋಹಿಣಿ ಸಿಂಧೂರಿ ಅವರಿಗೆ ಲೀಗಲ್ ನೋಟಿಸ್ ಕೊಟ್ಟಿದ್ದೆವು.

ನೋಟಿಸ್ಗೆ ರೋಹಿಣಿ ಸಿಂಧೂರಿ ಅವರು ಉತ್ತರ ಕೊಟ್ಟಿದ್ದು, ಸಾರಾ ಮಹೇಶ್ ವಿರುದ್ಧ ಮಾತನಾಡಿರೋ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಇದು ಖಾಸಗಿ ಸಂಭಾಷಣೆ ಎಂದು ಹೇಳಿದ್ದಾರೆ. ಇದೇ ಉತ್ತರದ ಆಧಾರದ ಮೇಲೆ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments