Publish Date: Wed, 22 Nov 2023 (20:12 IST)
Updated Date: Wed, 22 Nov 2023 (20:16 IST)
ಆಧುನಿಕ ವೈದ್ಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ ಹೇಳಿಕೆ ನೀಡುವುದು ಹಾಗೂ ಜಾಹೀರಾತು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಬಾಬಾ ರಾಮ ದೇವ್ ಅವರ ಪತಂಜಲಿ ಆಯುರ್ವೇದ ಕಂಪನಿಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಇಲ್ಲದಿದ್ದರೆ ಪತಂಜಲಿಯ ಪ್ರತಿ ಉತ್ಪನ್ನದ ಮೇಲೆ ತಲಾ 1 ಕೋಟಿ ರು. ದಂಡ ವಿಧಿಸುವುದಾಗಿ ಎಚ್ಚರಿಸಿದೆ.