Webdunia - Bharat's app for daily news and videos

Install App

1 ಲಕ್ಷ 80 ಸಾವಿರ ಮಂದಿ ಸಿಲುಕಿರುವ ಶಂಕೆ

Webdunia
ಗುರುವಾರ, 9 ಫೆಬ್ರವರಿ 2023 (16:23 IST)
ಟರ್ಕಿ ಹಾಗೂ ಸಿರಿಯಾದಲ್ಲಿ 4 ಪ್ರಬಲ ಭೂಕಂಪಗಳು ಸಂಭವಿಸಿದ್ದು, ಜನತೆಯನ್ನು ಅಕ್ಷರಶಃ ನರಕಕ್ಕೆ ತಳ್ಳಿದೆ. ಈಗಾಗಲೇ 8000ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ 1 ಲಕ್ಷ 80 ಸಾವಿರ ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರೂ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿಯಲ್ಲಿ 5,894 ಮಂದಿ ಮೃತಪಟ್ಟಿದ್ದು, ಸಿರಿಯಾದಲ್ಲಿ 1932 ಮಂದಿ ಸಾವನ್ನಪ್ಪಿದ್ದಾರೆ. ಅಂತಿಮವಾಗಿ ಸಾವಿನ ಸಂಖ್ಯೆ 20,000 ಮೀರಬಹುದು ಎಂದು ಅಂದಾಜಿಸಲಾಗಿದೆ. ಟರ್ಕಿ ಹಾಗೂ ಸಿರಿಯಾದಾದ್ಯಂತ ಸುಮಾರು 23 ಮಿಲಿಯನ್ ಜನರು ಈ ದುರಂತದಿಂದ ಪ್ರಭಾವಿತರಾಗಿದ್ದಾರೆ.ಕಳೆದ 24 ಗಂಟೆಗಳಲ್ಲಿ ಮೂರು ಪ್ರಬಲ ಭೂಕಂಪದಿಂದ ತತ್ತರಿಸಿರುವ ಟರ್ಕಿ ದೇಶದ ನೆರವಿಗೆ ಭಾರತವು ಧಾವಿಸಿರುವ ಬೆನ್ನಲ್ಲೇ ಈಗ ಭಾರತಕ್ಕೆ ಧನ್ಯವಾದವನ್ನು ಅರ್ಪಿಸಿದೆ. 24 ಗಂಟೆಗಳಲ್ಲಿ ಟರ್ಕಿಯಲ್ಲಿ ಮೂರು ವಿನಾಶಕಾರಿ ಭೂಕಂಪಗಳು ಸಂಭವಿಸಿದ ನಂತರ ದೇಶಕ್ಕೆ ಹಣವನ್ನು ಒದಗಿಸಿದ ಉದಾರತೆಗಾಗಿ ಭಾರತವನ್ನು ದೋಸ್ತ್ ಎಂದು ಕರೆಯುತ್ತಾ, ಭಾರತಕ್ಕೆ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ನವದೆಹಲಿಗೆ ಧನ್ಯವಾದ ಅರ್ಪಿಸಿದರು ಮತ್ತು ಅಗತ್ಯಕಾಲದಲ್ಲಿ ನೆರವಿಗೆ ಬಂದವನೇ ನಿಜವಾಗಿಯೂ ಸ್ನೇಹಿತ ಎಂದು ಹೇಳಿದರು. ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಮೂರು ತಿಂಗಳ ಅವಧಿಗೆ ಟರ್ಕಿಯ 10 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments