ಬಳ್ಳಾರಿಯ ಭತ್ರಿ ಪ್ರದೇಶದಲ್ಲಿ ಕಳೆದ ಜನವರಿ 21ರಂದು ನಾಯಿ ಕಡಿದು ತೀವ್ರ ಗಾಯಗೊಂಡಿದ್ದ ಬಾಲಕ ಶುಕ್ರವಾರ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ. 6 ವರ್ಷ ವಯಸ್ಸಿನ ಬಾಲಕ ಗೋಪಾಲ್ ಒಂಟಿಯಾಗಿ ತೆರಳುತ್ತಿದ್ದಾಗ ಸುಮಾರು 10 ನಾಯಿಗಳು ದಾಳಿ ಮಾಡಿ ಕಚ್ಚಿದ್ದರಿಂದ ಬಾಲಕ ತೀವ್ರವಾಗಿ ಗಾಯಗೊಂಡಿದ್ದ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಬಾಲಕನನ್ನು ದಾಖಲು ಮಾಡಲಾಗಿತ್ತು.
ಆದರೆ ಬಳ್ಳಾರಿಯಿಂದ ಬೆಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ. ಮಗನ ಸಾವಿನ ಸುದ್ದಿ ಕೇಳಿ ತಾಯಿ ಆದಿಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತೀವ್ರ ನಿಗಾಘಟಕದಲ್ಲಿ ಇರಿಸಲಾಗಿದೆ.