Webdunia - Bharat's app for daily news and videos

Install App

ಕಾರಿನಲ್ಲಿದ್ದ 10 ಲಕ್ಷ ರೂ. ಲಪಟಾಯಿಸಿರುವ ಕಳ್ಳರು

Webdunia
ಸೋಮವಾರ, 13 ಡಿಸೆಂಬರ್ 2021 (20:30 IST)
ಮಾಲೀಕರ ಮೊಮ್ಮಗಳ ವಿವಾಹ ಸಮಾರಂಭದ ಖರ್ಚಿಗಾಗಿ ಬ್ಯಾಂಕ್‍ನಿಂದ ಡ್ರಾ ಮಾಡಿದ್ದ 10 ಲಕ್ಷ ರೂ. ಹಣವನ್ನು ಕಾರಿನಲ್ಲಿಟ್ಟು ಟೀ ಕುಡಿಯಲು ಹೋದ ವೇಳೆ ಕಳ್ಳರು ಲಪಟಾಯಿಸಿರುವ ಘಟನೆ ಚಂದ್ರಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 
ಕೆಂಗೇರಿ ನಿವಾಸಿ ಶ್ರೀನಿವಾಸನ್ ಹಣ ಕಳೆದುಕೊಂಡವರು. ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಚಂದ್ರಲೇಔಟ್ ಠಾಣೆ ಪೆÇಲೀಸರು ತಿಳಿಸಿದರು. 
ಚಂದ್ರಲೇಔಟ್‍ನಲ್ಲಿ ಜಯಪ್ರಕಾಶ್ ಶೆಟ್ಟಿ ಎಂಬುವವರಿಗೆ ಸೇರಿದ ಅಪಾರ್ಟ್‍ಮೆಂಟ್‍ನಲ್ಲಿ ಶ್ರೀನಿವಾಸ್ ಮ್ಯಾನೇಜರ್ ಆಗಿದ್ದರು. ಜಯಪ್ರಕಾಶ್ ಶೆಟ್ಟಿ ಮೊಮ್ಮಗಳ ವಿವಾಹ
ಸಮಾರಂಭಕ್ಕೆ ಹಣದ ಅವಶ್ಯಕತೆಯಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿಕೊಂಡು ಬರುವಂತೆ ಶ್ರೀನಿವಾಸನ್‍ಗೆ ಡಿ.9ರಂದು ಸೂಚಿಸಿದ್ದರು. ಅದರಂತೆ ಜಯಪ್ರಕಾಶ್ ಶೆಟ್ಟಿ ಅವರ ಸ್ಕೋಡಾ ಕಾರಿನಲ್ಲಿ ಚಾಲಕನೊಂದಿಗೆ ಶ್ರೀನಿವಾಸ್ ಚಂದ್ರಲೇಔಟ್‍ನಲ್ಲಿರುವ 2 ಬ್ಯಾಂಕ್‍ಗಳಿಗೆ ತೆರಳಿ ಒಟ್ಟು 10 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಂಡು ಮನೆಗೆ ಹಿಂತಿರುಗುತ್ತಿದ್ದರು. ಮಾರ್ಗಮದ್ಯೆ ಅತ್ತಿಗುಪ್ಪೆ ಬಳಿ ಕಾರಿನ ಟೈಯರ್ ಪಂಚರ್ ಆಗಿತ್ತು. ಟೈಯರ್ ಬದಲಾಯಿಸಿಕೊಂಡು ಚಂದ್ರಲೇಔಟ್ 60 ಅಡಿರಸ್ತೆ, ಸ್ಪಿರಿಟ್ ಜಂಕ್ಷನ್ ಬಳಿ  ಕಾರನ್ನು ರಸ್ತೆ ಬದಿ ನಿಲುಗಡೆ ಮಾಡಿ ಚಾಲಕನ ಜತೆಗೆ ಶ್ರೀನಿವಾಸ್ ಟೀ ಕುಡಿಯಲು ಹೋಗಿದ್ದರು. ಆ ವೇಳೆ ಕಾರಿನ ಮಂಭಾಗದ ಬಾಗಿಲಿನ ಗ್ಲಾಸ್ ಒಡೆದ ಕಳ್ಳರು 10 ಲಕ್ಷ ರೂ. ಹಣವಿದ್ದ ಬ್ಯಾಗ್‍ನೊಂದಿಗೆ ಪರಾರಿಯಾಗಿದ್ದಾರೆ. ಶ್ರೀನಿವಾಸ್ ಟೀ ಕುಡಿದು ವಾಪಾಸಾದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಬಳಿಕ ಚಂದ್ರಲೇಔಟ್ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಸ್ಥಳೀಯ ಸಿಸಿಕ್ಯಾಮರಾ ಪರಿಶೀಲಿಸಿರುವ ಪೆÇಲೀಸರು ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments