ಚಿಕ್ಕಮಗಳೂರಿನ ಶಾಲೆಯಲ್ಲಿ 10 ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಸೋಂಕು

Webdunia
ಭಾನುವಾರ, 12 ಡಿಸೆಂಬರ್ 2021 (19:33 IST)
ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವುದು ಮಕ್ಕಳಲ್ಲಿ ಆತಂಕ ಮೂಡಿಸಿದೆ. ಈಗ ಮತ್ತೊಂದು ಖಾಸಗಿ ಶಾಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಓರ್ವ ಶಿಕ್ಷಕ ಹಾಗೂ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿನ ಉಳಿದ ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆಯನ್ನು ನಡೆಸಲು ಸೂಚಿಸಲಾಗಿದೆ. ಜೊತೆಗೆ ಒಂದು ವಾರಗಳ ಕಾಲ ಶಾಲೆಯನ್ನು ಸೀಲ್‌ಡೌನ್ ಮಾಡಲು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ವಾರದ ಹಿಂದಷ್ಟೇ ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಗ್ರಾಮದ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದು ಕಾಫಿನಾಡಿನ ಜನರ ಆತಂಕಕ್ಕೆ ಕಾರಣವಾಗಿತ್ತು. ಈಗ ಪುನಃ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು, ಬಂದವರು ಕೋವಿಡ್ ನಿಯಮಾವಳಿಗಳನ್ನು ಮರೆಯುತ್ತಿದ್ದಾರೆ. ಇದರಿಂದಲೇ ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದೆ ಎಂದು ಪ್ರವಾಸಿಗರ ವಿರುದ್ಧ ಜನರು ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments