Webdunia - Bharat's app for daily news and videos

Install App

ವಿಜಯಪುರದಲ್ಲಿ 10 ಸಾವಿರ ಎಕರೆ ವಕ್ಫ್ ಬೋರ್ಡ್ ಗೆ: ಸಚಿವ ಜಮೀರ್ ಆದೇಶಕ್ಕೆ ಹಿಂದೂಗಳ ಪ್ರತಿಭಟನೆ

Krishnaveni K
ಮಂಗಳವಾರ, 15 ಅಕ್ಟೋಬರ್ 2024 (11:30 IST)
ವಿಜಯಪುರ: ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ಚರ್ಚೆಯಲ್ಲಿರುವಾಗಲೇ ವಿಜಯಪುರದಲ್ಲಿ ವಕ್ಫ್ ಬೋರ್ಡ್ ಸುಮಾರು 10 ಸಾವಿರ ಎಕರೆ ತನ್ನದು ಎಂದು ಹೇಳಿಕೊಳ್ಳುತ್ತಿದ್ದು, ಸಚಿವ ಜಮೀರ್ ಅಹ್ಮದ್ ಆಸ್ತಿ ಸರ್ವೇಗೆ ಆದೇಶ ನೀಡಿದ್ದಾರೆ.

ವಿಜಯಪುರದಲ್ಲಿ ಸುಮಾರು 10 ಸಾವಿರ ಎಕರೆ ವಕ್ಫ್ ಬೋರ್ಡ್ ಗೆ ಸೇರಿದ್ದು ಎಂದು ವಕ್ಫ್ ಬೋರ್ಡ್ ಹೇಳಿಕೊಳ್ಳುತ್ತಿದೆ. ಇದರಲ್ಲಿ ಕಂದಾಯ ಇಲಾಖೆಯ 2148 ಎಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ 1012 ಎಕರೆ, ನಗರಾಭಿವೃದ್ಧಿ ಇಲಾಖೆ 322 ಎಕರೆ ಜಮೀನು ಒಳಗೊಂಡಿದೆ.

ಇದೆಲ್ಲವೂ ವಕ್ಫ್ ಆಸ್ತಿ ಎಂದು ಸರ್ವೇ ಮಾಡಲು ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. 45 ದಿನಗಳೊಳಗಾಗಿ ಸರ್ವೇ ನಡೆಸಲು ಆದೇಶ ನೀಡಿದ್ದಾರೆ. ಈಗಾಗಲೇ ಭೂಮಿ ಸರ್ವೇ ಬಗ್ಗೆ ನೋಟಿಸ್ ಪಡೆದವರು ಆತಂಕಕ್ಕಕೊಳಗಾಗಿದ್ದಾರೆ. ಇಂಧೀಕರಣ ನಡೆಸಿ ಪಹಣಿಯಲ್ಲಿ ವಕ್ಫ್ ಹೆಸರು ಸೇರಿಸುವುದು. ಫ್ಲಾಗಿಂಗ್ ನಡೆಸಿ ವಕ್ಫ್ ಆಸ್ತಿ ತನ್ನದೆಂದು ಘೋಷಿಸಿಕೊಂಡು ವಕ್ಫ್ ಜಮೀನು ಮಾರಾಟವಾಗದಂತೆ ಫ್ಲಾಗಿಂಗ್ ಮಾಡಲು ಸಚಿವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದು ಹಿಂದೂ ಸಂಘಟನೆಗಳ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದರ ವಿರುದ್ಧ ಇಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ ಮತ್ತು ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments