Webdunia - Bharat's app for daily news and videos

Install App

ಆನೆ ಕಾರಿಡಾರ್ ನಿರ್ಮಿಸಲು 100 ಕೋಟಿ ರೂಪಾಯಿ

Webdunia
ಶನಿವಾರ, 5 ಮಾರ್ಚ್ 2022 (14:06 IST)
ಆನೆ ಕಾರಿಡಾರ್ ನಿರ್ಮಿಸಲು ಕನಿಷ್ಠ 600 ಕೋಟಿ ರೂ.ಗಳನ್ನು ಒದಗಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಡಾನೆಗಳ ಉಪಟಳ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕೇವಲ 100 ಕೋಟಿ ರೂ.
ಬಜೆಟ್‍ನಲ್ಲಿ ಒದಗಿಸಿರುವುದು ಸಾಲದು. ಈ ಅತ್ಯಲ್ಪ ಹಣದಲ್ಲಿ ಆನೆ ಕಾರಿಡಾರ್ ನಿರ್ಮಿಸಲು ಸಾಧ್ಯವಾಗುವುದಿಲ್ಲ. ಸಕಲೇಶಪುರ ಮತ್ತು ಹಾಲೂರು ತಾಲ್ಲೂಕುಗಳಲ್ಲಿ 47 ಕಿ.ಮೀ ಉದ್ದದ ಬ್ಯಾರಿಕೇಡ್ ನಿರ್ಮಿಸಬೇಕಾಗಿದೆ. ಇತರೆ ಕಾರ್ಯಕ್ರಮ ಮತ್ತು ಆನೆ ಕಾರಿಡಾರ್ ನಿರ್ಮಿಸಲು ಅನುದಾನವನ್ನು ಹೆಚ್ಚಿಸಬೇಕು. ಪ್ರವಾಸೋದ್ಯಮ ಅಭಿವೃದ್ದಿ ವಿಚಾರದಲ್ಲಿ ಪಶ್ಚಿಮಘಟ್ಟದ ಸಕಲೇಶಪುರವನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಬಳಕೆಯಾಗದೆ ಉಳಿಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments