Webdunia - Bharat's app for daily news and videos

Install App

ತೊಗಲುಗೊಂಬೆ ಕಲೆಯನ್ನು ವಿದೇಶದಲ್ಲೂ ಪರಿಚಯಿಸಿದ 103 ವರ್ಷದ ಕೊಪ್ಪಳದ ಭೀಮವ್ವಗೆ ಪದ್ಮಶ್ರೀ ಪ್ರದಾನ

Sampriya
ಮಂಗಳವಾರ, 29 ಏಪ್ರಿಲ್ 2025 (14:29 IST)
Photo Courtesy X
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಯಿತು. 103 ವರ್ಷ ವಯಸ್ಸಿನ ತೊಗಲು ಗೊಂಬೆ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪ್ರದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಹಿಳೆಯೊಬ್ಬರ ನೆರವಿನಿಂದ ಬಂದ ಭೀಮವ್ವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮಸ್ಕರಿಸಿದರು. ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರತ್ತ ಸಾಗಿದರು. ಭೀಮವ್ವ ಮೆಲ್ಲನೆ ಹೆಜ್ಜೆ ಹಾಕುವುದನ್ನು ಗಮನಿಸಿದ ರಾಷ್ಟ್ರಪತಿ ಎದುರು ಬಂದು ಭೀಮವ್ವ ಅವರಿಗೆ ಕೈಮುಗಿದು ಪ್ರಶಸ್ತಿ ಪ್ರದಾನ ಮಾಡಿದರು.

ಭೀಮವ್ವ ಅವರು ಸಣ್ಣ ವಯಸ್ಸಿನಲ್ಲಿ ಅಪ್ಪ, ಮದುವೆಯ ನಂತರ ಪತಿ ಹಾಗೂ ಮಕ್ಕಳು, ಮೊಮ್ಮಕ್ಕಳೊಂದಿಗೆ ಕಲಿತ ತೊಗಲು ಗೊಂಬೆಯಾಟವನ್ನು 103 ವರ್ಷವಾದರೂ ತನ್ನ ಜೀವನಕ್ಕೆ ಆಧಾರವಾಗಿಸಿಕೊಂಡಿದ್ದಾರೆ.  ಈ ಕಲೆಯನ್ನೇ ಉಸಿರಾಗಿಸಿಕೊಂಡಿರುವ ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಗೌರವ ನೀಡಲಾಗಿದೆ.
 

ಭೀಮವ್ವ ಅವರಿಗೆ ಪ್ರಾಯ 103 ವರ್ಷವಾದರೂ, ಕಂಠ ಮಾಸಿಲ್ಲ, ಸಂಭಾಷಣೆ ಹಾಗೂ ಹಾಡುಗಳನ್ನು ಮರೆತಿಲ್ಲ. ಹೀಗೆ ಸರಾಗವಾಗಿ ಹಾಡುತ್ತಿರುವ ಪದ್ಮಶ್ರೀ ಪುರಸ್ಕೃತೆ ಭೀಮವ್ವ ಅಜ್ಜಿ, ತೊಗಲು ಗೊಂಬೆಯಾಟದ ಕಲೆಯನ್ನು ನಶಿಸಿ ಹೋಗದಂತೆ ಕಾಪಾಡಿಕೊಂಡು ಬಂದಿದ್ದಾರೆ.

ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿ ಈ ಕಲೆಯನ್ನು ಪರಿಚಯಿಸಿದ್ದಾರೆ. ಅಮೆರಿಕ, ಜಪಾನ್, ಸ್ವಿಡ್ಜರ್‌ಲ್ಯಾಂಡ್, ಜರ್ಮನಿ, ಇಟಲಿ, ಫ್ರಾನ್ಸ್, ಸೌದಿ ಅರೇಬಿಯಾ, ಐರ್ಲೆಂಡ್, ಪ್ಯಾರಿಸ್, ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಭೀಮವ್ವ ಅವರು ತೊಗಲು ಗೊಂಬೆಯಾಟವನ್ನು ಪ್ರದರ್ಶಿಸಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments