Webdunia - Bharat's app for daily news and videos

Install App

ವಿದ್ಯಾರ್ಥಿಗಳ ಕಪಿಚೇಷ್ಟೆಗೆ 11 ಗುಡಿಸಲುಗಳು ಭಸ್ಮ

Webdunia
ಶುಕ್ರವಾರ, 18 ಜನವರಿ 2019 (17:19 IST)
ಸಿಗರೇಟು ಸೇದಲು ಬಂದವರು 15 ಗುಡಿಸಲುಗಳಿಗೆ ಬೆಂಕಿ ಇಟ್ಟಿದ್ದು, ಅದರಲ್ಲಿ 11 ಗುಡಿಸಲುಗಳು ಸುಟ್ಟು ಭಸ್ಮವಾಗಿ ಬಡಜನರ ಬದುಕು ಬೀದಿಗೆ ಬಿದ್ದ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ಮಾಲೇಕಲ್ಲು ತಿರುಪತಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಬೆಟ್ಟದ ರಸ್ತೆಯಲ್ಲಿ ಗುಡಿಸಲುಗಳಿಗೆ ಹತ್ತಿಕೊಂಡ ಬೆಂಕಿಯು ಬಡಜನರ ಬದುಕನ್ನು ಕಿತ್ತುಕೊಂಡಿದೆ. 15 ಗುಡಿಸಲುಗಳಲ್ಲಿ, 11 ಗುಡಿಸಲುಗಳು ಬೆಂಕಿಯಿಂದಾಗಿ ಸಂಪೂರ್ಣ ಭಸ್ಮವಾಗಿವೆ.

ಸ್ವಂತ ಜಾಗ ಮನೆ ಇಲ್ಲದೆ, ಗುಡಿಸಲು ಕಟ್ಡಿಕೊಂಡು ವಾಸವಿದ್ದ ಬಡವರು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದಾರೆ.
ಗುಡಿಸಲಿನಲ್ಲಿ ಇದ್ದ ಸಾಮಾನು ಸರಂಜಾಮು, ಪಾತ್ರೆ ಸೇರಿ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಗುಡಿಸಲುಗಳ ಹತ್ತಿರದಲ್ಲಿಯೇ ಇರುವ ಚಂದ್ರಶೇಖರ ಭಾರತಿ ಐಟಿಐ ವಿದ್ಯಾರ್ಥಿಗಳೇ ಈ ಕೃತ್ಯಕ್ಕೆ ಕಾರಣ ಎಂದು ಆರೋಪ ಕೇಳಿಬಂದಿದೆ.

ಸಿಗರೇಟು ಸೇದಲು ಬಂದ ವಿದ್ಯಾರ್ಥಿಗಳು ಗುಡಿಸಲಿಗೆ ಬೆಂಕಿ ಹಚ್ಚಿ ಹೋಗಿದ್ದಾರೆ ಎಂದು‌ ಸ್ಥಳೀಯರು ಆರೋಪ ಮಾಡಿದ್ದಾರೆ. ವಿದ್ಯಾರ್ಥಿಗಳ ಕೃತ್ಯ ಕಾಲೇಜಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲೆ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ. ಈ ಕುರಿತು ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments