Webdunia - Bharat's app for daily news and videos

Install App

ದಿಗ್ವಿಜಯ್ ಸಿಂಗ್ ಅಳಿಯ 1.15 ಕೋಟಿ ಲಂಚ ಪಡೆದಿದ್ದಾರೆ: ಬಾಬುರಾವ್ ಚೌಹಾಣ್

Webdunia
ಮಂಗಳವಾರ, 17 ಅಕ್ಟೋಬರ್ 2017 (19:17 IST)
ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅಳಿಯ ಭವಾನಿ ಸಿಂಗ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಚೌಹಾಣ್ ಇಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಪ್ರೆಸ್‌‌‌ಕ್ಲಬ್‌‌‌ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಿಗ್ವಿಜಯ್ ಸಿಂಗ್ ಅಳಿಯ ಭವಾನಿ ಸಿಂಗ್ ರಾಜಸ್ತಾನದ ಜಯಪುರ ಮೂಲದವರು. ಬೆಂಗಳೂರಿನ ಜೆ.ಪಿ.ನಗರದ ಬಾಲಾಜಿ ಎಲೆಕ್ಟ್ರಿಕ್ಸ್ ಮಾಲೀಕ ಕೆ. ಚಂದ್ರಬಾಬುಗೆ ರಾಜ್ಯ ಸರ್ಕಾರ ವಿದ್ಯುತ್ ಗುತ್ತಿಗೆಯೊಂದನ್ನು ಟೆಂಡರ್ ಮುಖಾಂತರ ಕೊಡಿಸುವುದಾಗಿ ವಂಚಿಸಿ, 1.15 ಕೋಟಿ ರೂ. ಪಡೆದು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಚೆಕ್ ಮೂಲಕ ಲಂಚದ ಹಣವನ್ನು ಮುಂಗಡ ಪಡೆಯಲಾಗಿತ್ತು. ದಿಗ್ವಿಜಯ್ ಸಿಂಗ್‌‌ ಕೂಡ ಚಂದ್ರಬಾಬುರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ಸಂದರ್ಭ ಕೆಲಸ ಮಾಡಿಸಿಕೊಡುವುದಾಗಿ ಭರವಸೆ ನೀಡುತ್ತಾರೆ. ಹಣ ಪಡೆದಿದ್ದಕ್ಕೆ ಪ್ರತಿಯಾಗಿ ದಿಗ್ವಿಜಯ್ ಸಿಂಗ್ ಅಳಿಯ ಚೆಕ್ ನೀಡುತ್ತಾರೆ. ಕೆಲಸವಾಗದ ಕಾರಣ ಚೆಕ್ ಬೌನ್ಸ್ ಆಗಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಚೆಕ್ ಪಡೆದು ಸಿಕ್ಕಿಬೀಳುವ ಸಂಪ್ರದಾಯ ಹೊಸದೇನು ಅಲ್ಲ. ಇಂತಹ ಸಾಕಷ್ಟು ಕೆಲಸ ಮಾಡಿದ್ದಾರೆ. ಕೆಲಸವನ್ನೂ ಮಾಡಿ ಕೊಟ್ಟಿಲ್ಲ, ದುಡ್ಡೂ ವಾಪಸ್ ನೀಡಿಲ್ಲ. ಉಸ್ತುವಾರಿಯೂ ಹೋಯ್ತು, ಇತ್ತ ಮುಖವನ್ನೂ ಹಾಕಲಿಲ್ಲ. ಲಂಚ ತೆಗೆದುಕೊಳ್ಳುವುದು ಅದೂ ಚೆಕ್ ಮೂಲ ಪಡೆಯುವ ವಿಶಿಷ್ಟ ಪ್ರವೃತ್ತಿ ಕಾಂಗ್ರೆಸ್‌‌ನಲ್ಲಿ ಮಾತ್ರವಿದೆ. ಕಾಂಗ್ರೆಸ್ ನಾಯಕರ ಇಂತಹ ಭ್ರಷ್ಟಾಚಾರಕ್ಕೆ ಜನ 2018ರ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments