Webdunia - Bharat's app for daily news and videos

Install App

117 ಕೆ.ಜಿ. ತೂಕ ಹೊಂದಿದ್ದ ಮಹಿಳೆಗೆ ಎರಡನೇ ಬಾರಿ ಯಶಸ್ವಿ “ಬೇರಿಯಾಟ್ರಿಕ್” ಶಸ್ತ್ರಚಿಕಿತ್ಸೆ

Webdunia
ಶುಕ್ರವಾರ, 14 ಜನವರಿ 2022 (20:53 IST)
ಬೆಂಗಳೂರು: 117 ಕೆಜಿ ತೂಕ ಹೊಂದಿದ್ದ 50 ವರ್ಷದ ಮಹಿಳೆಗೆ ಫೊರ್ಟಿಸ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಬೊಜ್ಜು ಕರಗಿಸುವ “ಮರು ಬೇರಿಯಾಟ್ರಿಕ್” ಶಸ್ತçಚಿಕಿತ್ಸೆ ನಡೆಸಿದ್ದಾರೆ.
 
ಲ್ಯಾಪ್ರೋಸ್ಕೋಪಿ ಹಿರಿಯ ಸಲಹೆಗಾರ, ಬ್ಯಾರಿಯಾಟ್ರಿಕ್ ಸರ್ಜನ್ ಡಾ. ಗಣೇಶ್ ಶೆಣೈ ಅವರ ತಂಡವು 117 ತೂಕ ಹೊಂದಿದ್ದ ಮಹಿಳೆಗೆ ಮರು ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
 
50 ವರ್ಷದ ಮಹಿಳೆಯು 8 ವರ್ಷಗಳ ಹಿಂದೆಯೇ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೇರಿಯಾಟ್ರಿಕ್ ಶಸ್ತçಚಿಕಿತ್ಸೆ ಮಾಡಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಅವರು 114 ಕೆ.ಜಿ. ತೂಕ ಹೊಂದಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರು ಬರೋಬ್ಬರಿ 25 ಕೆ.ಜಿ. ತೂಕ ಹೊಂದಿದ್ದರು. ಆದರೆ, ಒಂದು ವರ್ಷದೊಳಗಾಗಿ ಗ್ಯಾಸ್ಟ್ರಿಕ್ ಸ್ಲೀವ್ ಹಿಗ್ಗುವಿಕೆಯಿಂದಾಗಿ 117 ಕೆ.ಜಿ. ತೂಕಕ್ಕೆ ಬಂದು ನಿಂತರು. ಇದು ಅತ್ಯಂತ ಅಪಾಯಕಾರಿ ಎಂದು ಡಾ. ಗಣೇಶ್ ಶೆಣೈ ಹೇಳುತ್ತಾರೆ.
 
ಈ ಮಹಿಳೆಯರು ಮೊದಲು ಮಾಡಿಸಿಕೊಂಡಿದ್ದ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ತೆರೆದ ಅಪೆಂಡೆಕ್ಟಮಿ ಸೇರಿದಂತೆ ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.  ಜೊತೆಗೆ ನ್ಯೂರೋ ಎಂಡೋಕ್ರೈನ್ ಟ್ಯೂಮರ್ ಸಹ ಹೊಂದಿದ್ದರು, ಈ ಎಲ್ಲದರ ಪರಿಣಾಮ ಅವರ ಗ್ಯಾಸ್ಟ್ರಿಕ್ ಸ್ಲೀವ್ ಹಿಗ್ಗುತ್ತಾ ಹೋಯಿತು. ಅವರು ಎಷ್ಟೇ ಡಯೆಟ್ ಹಾಗೂ ವ್ಯಾಯಾಮ ಮಾಡಿದರೂ ಅವರ ಬೊಜ್ಜು ಬೆಳೆಯುತ್ತಾ ಒಂದು ವರ್ಷದೊಳಗೆ 117 ಕೆ.ಜಿ.ಗೆ ಬಂದು ನಿಂತರು.
ನಮ್ಮ ತಂಡವು ಅವರ ಅಷ್ಟೂ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಅವರಿಗೆ ಲ್ಯಾಪರೋಸ್ಕೋಪಿಕ್ ಮರು ಸ್ಲೀವ್ ಶಸ್ತ್ರಚಿಕಿತ್ಸೆಯನ್ನು ನಡೆಸಿದೆವು. ಈ ಎಲ್ಲದರ ಪ್ರಯತ್ನದಿಂದಾಗಿ ಮತ್ತೊಮ್ಮೆ ಮಹಿಳೆಗೆ ಬೇರಿಯಾಟ್ರೀಕ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಬಾರಿ ಸೂಕ್ತ ರೀತಿಯಲ್ಲಿ ಶಸ್ತ್ರಚಿಕಿತ್ಸೆಯಾಗಿರುವುದರಿಂದ ಅವರ ತೂಕ ಕ್ರಮೇಣ ಕಡಿಮೆಯಾಗಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments