Webdunia - Bharat's app for daily news and videos

Install App

ಕೊಡಗು ನಿರಾಶ್ರಿತರಿಗೆ ಮುಜರಾಯಿ ಇಲಾಖೆಯಿಂದ 12 ಕೋಟಿ ನೆರವು

Webdunia
ಶುಕ್ರವಾರ, 24 ಆಗಸ್ಟ್ 2018 (16:07 IST)
ಕೊಡಗು ನಿರಾಶ್ರಿತರಿಗೆ ಮುಜರಾಯಿ ಇಲಾಖೆಯಿಂದ 12 ಕೋಟಿ 31 ಲಕ್ಷ ರೂ.ಗಳ ಸಹಾಯ ಹಸ್ತ ಚಾಚಲಿರುವುದಾಗಿ ಸಚಿವರು ಹೇಳಿದ್ದಾರೆ. ಅಷ್ಟೇ ಅಲ್ಲ, ಸರಕಾರ ಗಟ್ಟಿಯಾಗಿದೆ. ಯಾರ ಮಾತಿಗೂ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ಭಾರೀ ಮಳೆಯಿಂದ ಕಷ್ಟನಷ್ಟ ಸಂಭವಿಸಿರುವ ಕೊಡಗು ಜಿಲ್ಲೆಯ ಜನರ ಸಹಾಯಕ್ಕೆ ಸರಕಾರದ ವಿವಿಧ ಇಲಾಖೆಗಳು ಮುಂದಾಗುತ್ತಿವೆ. ಏತನ್ಮಧ್ಯೆ ಮುಜರಾಯಿ ಇಲಾಖೆಯಿಂದ 12 ಕೋಟಿ 31 ಲಕ್ಷ ರೂ. ಪರಿಹಾರ ಬಿಡುಗಡೆಗೊಳಿಸಲಿರುವುದಾಗಿ ಸಚಿವ ರಾಜಶೇಖರ ಪಾಟೀಲ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ಪ್ರವಾಹ ಪೀಡಿತರಿಗಾಗಿ ದೇವಾಲಯಗಳಿಂದ ಶೀಘ್ರದಲ್ಲೇ ಚೆಕ್ ಬಿಡುಗಡೆ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಹೊಸ ಸರ್ಕಾರ ರಚನೆ ಆಗಿ ಇನ್ನೂ ಎರಡು ತಿಂಗಳೂ ಆಗಿಲ್ಲ. ಅಭಿವೃದ್ಧಿಗೆ ಸಮಯ ಬೇಕು ಎಂದ ಅವರು, ಶ್ರಾವಣ ಮಾಸ ಮುಗಿದ್ರೊಳಗೆ ಸರ್ಕಾರ ಬೀಳುತ್ತದೆ ಎಂಬ ಬಸನಗೌಡ ಪಾಟೀಲ ಅವರ ಮಾತಿಗೆ ಟಾಂಗ್ ನೀಡಿದರು.
ನಮ್ಮ ಸರ್ಕಾರ ಗಟ್ಟಿ ಇದೆ ಯಾರ ಮಾತಿಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.   





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments