ಕೊಡಗು ನಿರಾಶ್ರಿತರಿಗೆ ಮುಜರಾಯಿ ಇಲಾಖೆಯಿಂದ 12 ಕೋಟಿ ನೆರವು

Webdunia
ಶುಕ್ರವಾರ, 24 ಆಗಸ್ಟ್ 2018 (16:07 IST)
ಕೊಡಗು ನಿರಾಶ್ರಿತರಿಗೆ ಮುಜರಾಯಿ ಇಲಾಖೆಯಿಂದ 12 ಕೋಟಿ 31 ಲಕ್ಷ ರೂ.ಗಳ ಸಹಾಯ ಹಸ್ತ ಚಾಚಲಿರುವುದಾಗಿ ಸಚಿವರು ಹೇಳಿದ್ದಾರೆ. ಅಷ್ಟೇ ಅಲ್ಲ, ಸರಕಾರ ಗಟ್ಟಿಯಾಗಿದೆ. ಯಾರ ಮಾತಿಗೂ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

ಭಾರೀ ಮಳೆಯಿಂದ ಕಷ್ಟನಷ್ಟ ಸಂಭವಿಸಿರುವ ಕೊಡಗು ಜಿಲ್ಲೆಯ ಜನರ ಸಹಾಯಕ್ಕೆ ಸರಕಾರದ ವಿವಿಧ ಇಲಾಖೆಗಳು ಮುಂದಾಗುತ್ತಿವೆ. ಏತನ್ಮಧ್ಯೆ ಮುಜರಾಯಿ ಇಲಾಖೆಯಿಂದ 12 ಕೋಟಿ 31 ಲಕ್ಷ ರೂ. ಪರಿಹಾರ ಬಿಡುಗಡೆಗೊಳಿಸಲಿರುವುದಾಗಿ ಸಚಿವ ರಾಜಶೇಖರ ಪಾಟೀಲ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ಪ್ರವಾಹ ಪೀಡಿತರಿಗಾಗಿ ದೇವಾಲಯಗಳಿಂದ ಶೀಘ್ರದಲ್ಲೇ ಚೆಕ್ ಬಿಡುಗಡೆ ಮಾಡಲಿದ್ದೇವೆ ಎಂದಿದ್ದಾರೆ. ಇನ್ನು ಹೊಸ ಸರ್ಕಾರ ರಚನೆ ಆಗಿ ಇನ್ನೂ ಎರಡು ತಿಂಗಳೂ ಆಗಿಲ್ಲ. ಅಭಿವೃದ್ಧಿಗೆ ಸಮಯ ಬೇಕು ಎಂದ ಅವರು, ಶ್ರಾವಣ ಮಾಸ ಮುಗಿದ್ರೊಳಗೆ ಸರ್ಕಾರ ಬೀಳುತ್ತದೆ ಎಂಬ ಬಸನಗೌಡ ಪಾಟೀಲ ಅವರ ಮಾತಿಗೆ ಟಾಂಗ್ ನೀಡಿದರು.
ನಮ್ಮ ಸರ್ಕಾರ ಗಟ್ಟಿ ಇದೆ ಯಾರ ಮಾತಿಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.   





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments