Webdunia - Bharat's app for daily news and videos

Install App

12 ವರ್ಷಗಳ ಹಿಂದಿನ ಕೊಲೆ ಕೇಸ್ ಜೀವಂತ..!

Webdunia
ಶುಕ್ರವಾರ, 4 ಫೆಬ್ರವರಿ 2022 (14:59 IST)
ಬಳ್ಳಾರಿ : ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ನಗರಸಭೆ ಸದಸ್ಯೆ ಜಿ. ಪದ್ಮಾವತಿ ಯಾದವ್ ಕೊಲೆ ಪ್ರಕರಣ ಸಂಭವಿಸಿ 12 ವರ್ಷಗಳಾದರೂ ಆರೋಪಿಗಳು ಪತ್ತೆಯಾಗಿಲ್ಲ.
 
ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದ್ದರೆ, ಇನ್ನೊಂದೆಡೆ ದೂರುದಾರರು ಕೇಂದ್ರ ಸರಕಾರಕ್ಕೂ ಮನವಿ ಸಲ್ಲಿಸಲು ಮುಂದಾಗಿರುವುದು ಸಂಚಲನ ಮೂಡಿಸಿದೆ.

2010 ಫೆಬ್ರುವರಿ 04ರಂದು ಪದ್ಮಾವತಿ ಅವರ ಕೊಲೆಯಾಗಿತ್ತು. ಸದ್ಯ ಈ ಪ್ರಕರಣ ನಡೆದು 12 ವರ್ಷಗಳು ಕಳೆದಿದ್ದರೂ ಈವರೆಗೂ ಆರೋಪಿಗಳು ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ಸಮರ್ಪಕವಾಗಿ ನಡೆಸಲು ಸಿಬಿಐಗೆ ವಹಿಸುವಂತೆ ಮೃತ ಪದ್ಮಾವತಿ ಯಾದವ್ ಅವರ ಸಹೋದರ ಸುಬ್ಬರಾಯುಡು, ಧಾರವಾಡ ಹೈಕೋಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇದರೊಂದಿಗೆ 2020ರ ಡಿಸೆಂಬರ್ 01ರಂದು ಬೆಂಗಳೂರಿನ ಮುಖ್ಯಮಂತ್ರಿ ಕಚೇರಿ, ಗೃಹ ಇಲಾಖೆ ಕಾರ್ಯದರ್ಶಿ, ಗೃಹ ಸಚಿವರ ಕಚೇರಿಗೂ ತೆರಳಿ ಮನವಿ ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿರುವ ಸರಕಾರ, ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ಮಾಹಿತಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments