Webdunia - Bharat's app for daily news and videos

Install App

ಅಕ್ರಮವಾಗಿ ಭಾರತದೊಳಗೆ ನುಸಳಿ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ 13 ಮಂದಿ

Webdunia
ಮಂಗಳವಾರ, 7 ಸೆಪ್ಟಂಬರ್ 2021 (20:15 IST)
ಅಕ್ರಮವಾಗಿ ಭಾರತದೊಳಗೆ ನುಸಳಿ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ 13 ಮಂದಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ನಗರದ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. 
ಬಾಂಗ್ಲಾ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆಧಾರ್ ಕಾರ್ಡ್ ಸೇರಿ ಅಕ್ರಮವಾಗಿ ನಾನಾ ದಾಖಲಾತಿ ಸೃಷ್ಟಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ ರಫೀಕ್, ಶೋಬಜ್, ರಿದಾಯ್ ಬಾಬು, ರಕೀಬುಲ್ ಸಾಗರ್, ದಾಲೀಮ್ ಸೇರಿ 13 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ. 
ಆರೋಪಿಗಳು ಭಾರತದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬಾಂಗ್ಲಾ ಮೂಲದ ಯುವತಿಯರನ್ನು ತಮ್ಮ ಸಹಚರರ ಮೂಲಕ ನಗರಕ್ಕೆ ಕರೆಸಿಕೊಳ್ಳುತ್ತಿದ್ದರು. ಬಳಿಕ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು. ಇದೇ ರೀತಿ ಮೇ 27ರಂದು ರಾಮಮೂರ್ತಿನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಕನಕನಗರದ ಬಾಡಿಗೆ ಮನೆಯೊಂದಕ್ಕೆ ಬಾಂಗ್ಲಾ ಯುವತಿಯನ್ನು ಕರೆಸಿ ಆಕೆಯ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿದ್ದರು. ಈ ಸಂಬಂಧ ರಾಮಮೂರ್ತಿನಗರ ಪೆÇಲೀಸರು 13 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಬಯಲಾಗಿತ್ತು. 
ಈ ವೇಳೆ ಆರೋಪಿಗಳ ವಶದಲ್ಲಿದ್ದ 7 ಬಾಂಗ್ಲಾ ಮೂಲದ ಯುವತಿಯರನ್ನು ಪೆÇಲೀಸರು ರಕ್ಷಿಸಿದ್ದರು. ಅಲ್ಲದೆ, ಕಾನೂನುಬಾಹಿರವಾಗಿ ಭಾರತಕ್ಕೆ ನುಸುಳಿ ವಾಮಮಾರ್ಗದಲ್ಲಿ ಆಧಾರ್‍ಕಾರ್ಡ್, ಪಾನ್? ಕಾರ್ಡ್ ಮಾಡಿಸಿರುವುದು ಎನ್‍ಐಎ ತನಿಖೆ ವೇಳೆ ಗೊತ್ತಾಗಿತ್ತು. ಹೀಗಾಗಿ, ಕಳೆದ ಜೂನ್‍ನಲ್ಲಿ ರಾಮಮೂರ್ತಿನಗರ ಪೆÇಲೀಸರಿಂದ ಮಾಹಿತಿ ಪಡೆದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಪ್ರತ್ಯೇಕವಾಗಿ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳನ್ನು ಬಾಡಿ ವಾರೆಂಟ್ ಮೇರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಕ್‌ಮ್ಯಾನ್‌ ಬಗ್ಗೆ ಮೊದಲ ಪತ್ನಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

ಕಪಾಳಮೋಕ್ಷದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸಿಎಂ ರೇಖಾ ಗುಪ್ತಾ

ಮುಂದಿನ ಸುದ್ದಿ
Show comments