Webdunia - Bharat's app for daily news and videos

Install App

ಸೇನೆಯಿಂದ 14 ಮಂದಿ ಹತ್ಯೆ; ಎಎಫ್‌ಎಸ್ ಪಿಎ ರದ್ದತಿಗೆ ನಾಗಾಲ್ಯಾಂಡ್ ಸಿಎಂ ಆಗ್ರಹ.

Webdunia
ಮಂಗಳವಾರ, 7 ಡಿಸೆಂಬರ್ 2021 (20:14 IST)
ಕೊಹಿಮಾ: ನಾಗಾಲ್ಯಾಂಡ್ ನಲ್ಲಿ ಭಾರತೀಯ ಸೇನೆ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ನಡೆಸಬೇಕಿದ್ದ ದಾಳಿಯಲ್ಲಿ ಸಾವನ್ನಪ್ಪಿದ್ದ 14 ಮಂದಿ ಗಣಿ ಕಾರ್ಮಿಕರ ಅಂತ್ಯ ಸಂಸ್ಕಾರ ನಡೆದಿದ್ದು ರಾಜ್ಯದಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್‌ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆ, 1958 ಜಾರಿಯಲ್ಲಿದೆ. ರಾಜ್ಯಕ್ಕೂ ವಿಶೇಷ ಸ್ಥಾನಮಾನಗಳಿವೆ. ಎಎಫ್‌ಎಸ್ ಪಿಎ ಯನ್ನು ಜಾರಿಗೊಳಿಸುವುದು ಹಾಗೂ ರದ್ದುಗೊಳಿಸುವ ವಿಷಯವಾಗಿ ಚರ್ಚೆಗಳು ನಡೆಯಬೇಕು ಎಂದು ಕಾರ್ಮಿಕರ ಅಂತ್ಯಕ್ರಿಯೆಯ ವೇಳೆ ನಾಗಾಲ್ಯಾಂಡ್ ಸಿಎಂ ಹೇಳಿದ್ದಾರೆ.
ನಾಗಾಲ್ಯಾಂಡ್ ಗೆ ಸಂವಿಧಾನದ ಆರ್ಟಿಕಲ್ 371 (A) ವಿಶೇಷ ಸ್ಥಾನಮಾನ ನೀಡಿದ್ದು, ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯುವವರೆಗೆ ಸಂಸತ್ ನ ಯಾವುದೇ ಕಾಯ್ದೆಗಳೂ ರಾಜ್ಯಕ್ಕೆ ಅನ್ವಯವಾಗುವುದಿಲ್ಲ.
ನಾಗಾಲ್ಯಾಂಡ್ ಹಾಗೂ ನಾಗ ಮಂದಿ ಎಂದಿಗೂ ಎಎಫ್‌ಎಸ್ ಪಿಎಯನ್ನು ವಿರೋಧಿಸುತ್ತಿದ್ದಾರೆ. ಅದನ್ನು ರದ್ದುಗೊಳಿಸಬೇಕು, 14 ಮಂದಿ ಗಣಿ ಕಾರ್ಮಿಕರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ. ನಾವು ಈ ವಿಷಯವಾಗಿ ಒಗ್ಗಟ್ಟಿನಿಂದ ಇದ್ದೇವೆ ಎಂದು ನಿಫಿಯು ರಿಯೊ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments