Webdunia - Bharat's app for daily news and videos

Install App

ಸೇನೆಯಿಂದ 14 ಮಂದಿ ಹತ್ಯೆ; ಎಎಫ್‌ಎಸ್ ಪಿಎ ರದ್ದತಿಗೆ ನಾಗಾಲ್ಯಾಂಡ್ ಸಿಎಂ ಆಗ್ರಹ.

Webdunia
ಮಂಗಳವಾರ, 7 ಡಿಸೆಂಬರ್ 2021 (20:14 IST)
ಕೊಹಿಮಾ: ನಾಗಾಲ್ಯಾಂಡ್ ನಲ್ಲಿ ಭಾರತೀಯ ಸೇನೆ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ನಡೆಸಬೇಕಿದ್ದ ದಾಳಿಯಲ್ಲಿ ಸಾವನ್ನಪ್ಪಿದ್ದ 14 ಮಂದಿ ಗಣಿ ಕಾರ್ಮಿಕರ ಅಂತ್ಯ ಸಂಸ್ಕಾರ ನಡೆದಿದ್ದು ರಾಜ್ಯದಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್‌ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆ, 1958 ಜಾರಿಯಲ್ಲಿದೆ. ರಾಜ್ಯಕ್ಕೂ ವಿಶೇಷ ಸ್ಥಾನಮಾನಗಳಿವೆ. ಎಎಫ್‌ಎಸ್ ಪಿಎ ಯನ್ನು ಜಾರಿಗೊಳಿಸುವುದು ಹಾಗೂ ರದ್ದುಗೊಳಿಸುವ ವಿಷಯವಾಗಿ ಚರ್ಚೆಗಳು ನಡೆಯಬೇಕು ಎಂದು ಕಾರ್ಮಿಕರ ಅಂತ್ಯಕ್ರಿಯೆಯ ವೇಳೆ ನಾಗಾಲ್ಯಾಂಡ್ ಸಿಎಂ ಹೇಳಿದ್ದಾರೆ.
ನಾಗಾಲ್ಯಾಂಡ್ ಗೆ ಸಂವಿಧಾನದ ಆರ್ಟಿಕಲ್ 371 (A) ವಿಶೇಷ ಸ್ಥಾನಮಾನ ನೀಡಿದ್ದು, ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯುವವರೆಗೆ ಸಂಸತ್ ನ ಯಾವುದೇ ಕಾಯ್ದೆಗಳೂ ರಾಜ್ಯಕ್ಕೆ ಅನ್ವಯವಾಗುವುದಿಲ್ಲ.
ನಾಗಾಲ್ಯಾಂಡ್ ಹಾಗೂ ನಾಗ ಮಂದಿ ಎಂದಿಗೂ ಎಎಫ್‌ಎಸ್ ಪಿಎಯನ್ನು ವಿರೋಧಿಸುತ್ತಿದ್ದಾರೆ. ಅದನ್ನು ರದ್ದುಗೊಳಿಸಬೇಕು, 14 ಮಂದಿ ಗಣಿ ಕಾರ್ಮಿಕರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ. ನಾವು ಈ ವಿಷಯವಾಗಿ ಒಗ್ಗಟ್ಟಿನಿಂದ ಇದ್ದೇವೆ ಎಂದು ನಿಫಿಯು ರಿಯೊ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments