Webdunia - Bharat's app for daily news and videos

Install App

ದೇಶದಲ್ಲಿ ಪ್ರತಿದಿನ 14 ಲಕ್ಷ ಪ್ರಕರಣಗಳು ದಾಖಲಾಗುವ ಸ್ಥಿತಿ ಬರಬಹುದು: ಕೇಂದ್ರ ಸರ್ಕಾರ

Webdunia
ಶನಿವಾರ, 18 ಡಿಸೆಂಬರ್ 2021 (20:09 IST)
ವಿಶ್ವದಲ್ಲಿ ಹಬ್ಬುತ್ತಿರುವ ಕೊರೊನಾ ರೂಪಾಂತರಿ ಬಗ್ಗೆ ಒಕ್ಕೂಟ ಸರ್ಕಾರ ಎಚ್ಚರಿಕೆ ನೀಡಿದೆ. ಓಮಿಕ್ರಾನ್ ಭಾರತದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇಲ್ಲಿಯೂ ಬ್ರಿಟನ್ ಮತ್ತು ಫ್ರಾನ್ಸ್‌ನಲ್ಲಿನ ಸ್ಥಿತಿಯೇ ಬಂದರೆ ಪ್ರತಿದಿನ 14 ಲಕ್ಷ ಪ್ರಕರಣಗಳು ದಾಖಲಾಗುವ ಸ್ಥಿತಿ ಬರಬಹುದು ಎಂದು ಕೋವಿಡ್ ಟಾಸ್ಕ್‌ಫೋರ್ಸ್ ಮುಖ್ಯಸ್ಥರು ಹೇಳಿದ್ದಾರೆ.
ದೇಶದಲ್ಲಿ ಪ್ರಸ್ತುತ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 101 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
“ಯುಕೆಯಲ್ಲಿ ಸೋಂಕು ಹರಡುವಿಕೆಯ ಪ್ರಮಾಣವನ್ನು ನೋಡಿದರೆ, ಭಾರತದಲ್ಲಿ ಇದೇ ರೀತಿಯ ಏಕಾಏಕಿ ಪ್ರಕರಣಗಳು ವರದಿಯಾದರೆ, ನಮ್ಮ ಜನಸಂಖ್ಯೆಯನ್ನು ಗಮನಿಸಿದರೆ ಪ್ರತಿದಿನ 14 ಲಕ್ಷ ಪ್ರಕರಣಗಳು ದಾಖಲಾಗುತ್ತದೆ. ಫ್ರಾನ್ಸ್ ಪ್ರತಿದಿನ 65,000 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ನಮ್ಮಲ್ಲಿ ಪ್ರಕರಣಗಳು ವರದಿಯಾದರೆ ದೇಶದ ಜನಸಂಖ್ಯೆ ಆಧಾರದಲ್ಲಿ ಪ್ರತಿದಿನ 13 ಲಕ್ಷ ಪ್ರಕರಣಗಳು ವರದಿಯಾಗುತ್ತವೆ” ಎಂದು ಡಾ. ವಿಕೆ ಪೌಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.
ಯುಕೆಯಲ್ಲಿ ಪ್ರತಿದಿನ 88,042 ಪ್ರಕರಣಗಳು ವರದಿಯಾಗುತ್ತಿದ್ದು, ಅದರಲ್ಲಿ 2.4% ಪ್ರಕರಣಗಳು ಓಮಿಕ್ರಾನ್ ಸೋಂಕುಗಳಾಗಿವೆ. 80 ಪ್ರತಿಶತದಷ್ಟು ವ್ಯಾಕ್ಸಿನೇಷನ್‌ ಹೊರತಾಗಿಯೂ ಯುರೋಪ್ ಗಂಭೀರ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.
ಅನವಶ್ಯಕ ಪ್ರಯಾಣ, ಜನಸಂದಣಿ, ಹೊಸ ವರ್ಷದ ಸಂಭ್ರಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ. “ಇದು ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವ ಸಮಯವಾಗಿದೆ. ಸಾಮೂಹಿಕ ಸಭೆಗಳನ್ನು ತಪ್ಪಿಸಬೇಕಾಗಿದೆ. ಹಬ್ಬಗಳು ಮತ್ತು ಹೊಸ ವರ್ಷದ ಆಚರಣೆಗಳಲ್ಲಿ ಎಚ್ಚರ ವಹಿಸಬೇಕಿದೆ” ಎಂದು ಡಾ.ಪೌಲ್ ಎಚ್ಚರಿಸಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 40 ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ, ಗುಜರಾತ್, ದೆಹಲಿ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶಗಳಲ್ಲಿಯೂ ಓಮಿಕ್ರಾನ್ ರೂಪಾಂತರಿ ಪ್ರಕರಣಗಳ ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments